ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

6 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

7 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

7 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

7 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

7 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

7 hours ago