ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

5 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

10 hours ago