ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

10 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

10 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

11 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

11 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

11 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

11 hours ago