ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

21 seconds ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

8 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

14 mins ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

43 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

1 hour ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

1 hour ago