ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago