ಜಿಲ್ಲೆಗಳು

ದಸರೆಗೆ ಬಂದ ರಾಷ್ಟ್ರಪತಿ: ಹಾಡಿ ಮಂದಿಗೆ ಸಂಭ್ರಮ

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿ ಮೈಸೂರು ಭಾಗದ ಆದಿವಾಸಿ ಸಮುದಾಯಗಳಲ್ಲಿ ಪುಳಕ ಮೂಡಿಸಿದೆ.
ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು ಅವರಿಗೆ ಆದಿವಾಸಿಗಳ ಸಾಂಪ್ರದಾಯಿಕ ಸ್ವಾಗತದೊಂದಿಗೆ ಸ್ವಾಗತ ಕೋರಲಾಯಿತು. ಇದೇ ಮೈಸೂರು ಭಾಗದ ವಿವಿಧ ಹಾಡಿಗಳಿಗೆ ಸೇರಿದ 14 ಆದಿವಾಸಿಗಳಿಗೆ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಳ್ಳುವ ಅವಕಾಶ ನೀಡಲಾಯಿತು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿರಥದಲ್ಲಿ ಆರೂಢಳಾದ ಮಹಿಷಾಸುರಮರ್ದಿನಿಯ ಪಂಚಲೋಹದ ವಿಗ್ರಹಕ್ಕೆ ರಾಷ್ಟ್ರಪತಿಗಳು ಪುಷ್ಪಾರ್ಚನೆ ಮಾಡುವುದರೊಂದಿಗೆ 412ನೇ ದಸರಾದ ವಿಧಿವಿಧಾನಗಳು ಆರಂಭವಾಗಿವೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಆದಿವಾಸಿ ಸಮುದಾಯದ ಆಯ್ದ 14 ಮಂದಿ ‌ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿದರು. ಇದೇ ವೇಳೆ ಆದಿವಾಸಿಗಳ ಬೇಡಿಕೆಗೆ ಸಂಬಂಧಿಸಿದ ಪತ್ರವೊಂದನ್ನುಹುಣಸೂರು ತಾಲ್ಲೂಕಿನ ಶೆಟ್ಟಹಳ್ಳಿ ಹಾಡಿಯ ಜೇನುಕುರುಬ ಜನಾಂಗದ ಜಿ.ಟಿ.ರಾಜಪ್ಪ, ಶಿವಣ್ಣ, ಹನಗೋಡು ಹೋಬಳಿಯ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಸೋನಿ, ನಾಗಪುರ ಐದನೇ ಘಟಕದ ಯರವ ಜನಾಂಗದ ವೀಣಾ, ಎಚ್.ಡಿ.ಕೋಟೆ ತಾಲ್ಲೂಕಿನ ಅಂಕನಾಥಪುರದ ಯರವ ಜನಾಂಗದ ವಿಠಲ, ಅಂತರಸಂತೆ ಹೋಬಳಿ ಆನೆಮಾಳದ ಹಾಡಿಯ ಜೇನುಕುರುಬ ಜನಾಂಗದ ರಾಮು, ಬಸವನಗಿರಿ ಬಿ.ಹಾಡಿಯ ಕಾಡುಕುರುಬ ಜನಾಂಗದ ಕಾಳಕಲ್ಕರ, ಪಿರಿಯಾಪಟ್ಟಣ ತಾಲ್ಲೂಕಿನ ಮರಳಕಟ್ಟೆ ಹಾಡಿಯ ಜೇನುಕುರುಬ ಜನಾಂಗದ ಎಂ.ಟಿ.ಕುಮಾರ, ರಾಣಿಗೇಟ್ ಹಾಡಿಯ ಸೋಲಿಗ ಜನಾಂಗದ ಆರ್.ಶಾಂತರಾಜ್, ಜೆ.ಡಿ.ಜಯಪ್ಪ, ಅಬ್ಬಳತಿ ಎ ಹಾಡಿಯ ಜೇನುಕುರುಬ ಜನಾಂಗದ ಪೂವಿ, ಜಾನಕಮ್ಮ, ಕರ್ನಾಟಕ ರಾಜ್ಯ ಬುಡಕಟ್ಟು ಹಿತರಕ್ಷಣಾ ಸಂಘದ ರಾಜ್ಯಾಧ್ಯಕ್ಷ, ಪರಿಶಿಷ್ಟ ಜನಾಂಗಕ್ಕೆ ಸೇರಿದ ಎಸ್.ಎಚ್.ಸುಭಾಷ್, ಹುಣಸೂರು ತಾಲ್ಲೂಕಿನ ಕೊಳವಿಗೆ ಹಾಡಿಯ ಜೇನುಕುರುಬ ಸಂಘದ ಗಣೇಶ್ ರಾಷ್ಟ್ರಪತಿ ಜತೆ ಫೋಟೋ ತೆಗೆಸಿಕೊಂಡರು.
ಮೈಸೂರು ದಸರಾಕ್ಕೂ ಗಿರಿಜನರಿಗೂ ಮೊದಲಿನಿಂದಲೂ ನಂಟಿದೆ. ಜಂಬೂಸವಾರಿಯ ಆಕರ್ಷಣೆಯಾದ ಗಜಪಡೆಯ ಸೇವಕರಲ್ಲಿ ಬಹುಪಾಲು ಜನ ಸೋಲಿಗರೇ. ಹಲವಾರು ವರ್ಷದಿಂದ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರುವ ಗಿರಿಜನರಿಗೆ ಈ ಬಾರಿ ರಾಷ್ಟ್ರಪತಿ ಆಗಮನ ಮತ್ತು ಒಡನಾಟ ಹೊಸ ಅನುಭವ ನೀಡಿದೆ.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

8 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

8 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

9 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago