ಜಿಲ್ಲೆಗಳು

ದಸರಾ ಉಪ ಸಮಿತಿ : ಗ್ರಾಮೀಣ ಮುಖಂಡರಿಗೂ ಅವಕಾಶ

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು

ಕೆ.ಬಿ.ರಮೇಶನಾಯಕ
ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ ಪಾಳಯದಲ್ಲಿ ಸಂತಸ ಮೂಡಿಸಿದೆ.

ದಸರಾ ಉಪ ಸಮಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ವಿಚಾರ ಹೊರಬರುತ್ತಿದ್ದಂತೆ ಹಲವಾರು ಮುಖಂಡರು ತಮ್ಮ ಹೆಸರನ್ನು ಸೇರಿಸುವಂತೆ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಹೀಗಾಗಿ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಮುಖಂಡರ ಹೆಸರು ಅಂತಿಮವಾದ ಮೇಲೆ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಯಾವ್ಯಾವ ಸಮಿತಿಗಳಿಗೆ ನೇಮಕ: ಸ್ತಬ್ಧಚಿತ್ರ, ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವಸಂಭ್ರಮ-ಯುವ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸಿ, ರೈತ, ಗ್ರಾಮೀಣ ದಸರಾ ಮುಂತಾದ ಉಪ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ತಲಾ ಒಂದೊಂದು ಸಮಿತಿಗೆ ೪೦ರಿಂದ ೫೦ ಸದಸ್ಯರನ್ನು ನೇಮಿಸಲಾಗುತ್ತದೆ. ಬಹುತೇಕ ಉಪ ಸಮಿತಿಗಳಿಗೆ ನಗರದ ಪ್ರಮುಖರು, ನಗರ ಬಿಜೆಪಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಈಗ ಗ್ರಾಮಾಂತರ ಪ್ರದೇಶದ ಮುಖಂಡರನ್ನು ಸೇರಿಸುವ ಕಾರಣ ನಗರ ಮತ್ತು ಗ್ರಾಮಾಂತರ ಬಿಜೆಪಿ ಸಮ್ಮಿಲನದಂತೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದರೆ, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಕ್ಷೇತ್ರದ ಪ್ರಮುಖರಿಂದ ಪಟ್ಟಿ ಕೇಳಲಾಗಿದೆ. ಈ ಕ್ಷೇತ್ರಗಳಿಂದ ಬರುವ ಹೆಸರನ್ನು ಪರಿಶೀಲಿಸಿ ಸಲ್ಲಿಸುವಂತೆ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಅವರಿಗೆ ಹೇಳಲಾಗಿದೆ. ಅದೇ ರೀತಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರ ಸಮ್ಮುಖದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಜಿ.ಗಿರಿಧರ್, ವಿ.ಸೋಮಸುಂದರ್, ವಾಣೀಶ್‌ಕುಮಾರ್ ಅವರು ಹೆಸರುಗಳನ್ನು ಆಯ್ಕೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಎರಡೂ ಪಟ್ಟಿಗಳನ್ನು ಒಂದು ಕಡೆ ಇಟ್ಟುಕೊಂಡು ಮೌಲ್ಯಮಾಪನ ಮಾಡಿ ಪಕ್ಷದ ಹಿರಿಯರು, ಅವಕಾಶ ವಂಚಿತರು, ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಂತಿಮಗೊಳಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖಂಡರೊಬ್ಬರು ಹೇಳಿದರು.

andolanait

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

6 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

14 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

32 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

45 mins ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

52 mins ago

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…

1 hour ago