ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು
ಕೆ.ಬಿ.ರಮೇಶನಾಯಕ
ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ ಪಾಳಯದಲ್ಲಿ ಸಂತಸ ಮೂಡಿಸಿದೆ.
ದಸರಾ ಉಪ ಸಮಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ವಿಚಾರ ಹೊರಬರುತ್ತಿದ್ದಂತೆ ಹಲವಾರು ಮುಖಂಡರು ತಮ್ಮ ಹೆಸರನ್ನು ಸೇರಿಸುವಂತೆ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಹೀಗಾಗಿ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಮುಖಂಡರ ಹೆಸರು ಅಂತಿಮವಾದ ಮೇಲೆ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಯಾವ್ಯಾವ ಸಮಿತಿಗಳಿಗೆ ನೇಮಕ: ಸ್ತಬ್ಧಚಿತ್ರ, ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವಸಂಭ್ರಮ-ಯುವ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸಿ, ರೈತ, ಗ್ರಾಮೀಣ ದಸರಾ ಮುಂತಾದ ಉಪ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ತಲಾ ಒಂದೊಂದು ಸಮಿತಿಗೆ ೪೦ರಿಂದ ೫೦ ಸದಸ್ಯರನ್ನು ನೇಮಿಸಲಾಗುತ್ತದೆ. ಬಹುತೇಕ ಉಪ ಸಮಿತಿಗಳಿಗೆ ನಗರದ ಪ್ರಮುಖರು, ನಗರ ಬಿಜೆಪಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಈಗ ಗ್ರಾಮಾಂತರ ಪ್ರದೇಶದ ಮುಖಂಡರನ್ನು ಸೇರಿಸುವ ಕಾರಣ ನಗರ ಮತ್ತು ಗ್ರಾಮಾಂತರ ಬಿಜೆಪಿ ಸಮ್ಮಿಲನದಂತೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದರೆ, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಕ್ಷೇತ್ರದ ಪ್ರಮುಖರಿಂದ ಪಟ್ಟಿ ಕೇಳಲಾಗಿದೆ. ಈ ಕ್ಷೇತ್ರಗಳಿಂದ ಬರುವ ಹೆಸರನ್ನು ಪರಿಶೀಲಿಸಿ ಸಲ್ಲಿಸುವಂತೆ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಅವರಿಗೆ ಹೇಳಲಾಗಿದೆ. ಅದೇ ರೀತಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರ ಸಮ್ಮುಖದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಜಿ.ಗಿರಿಧರ್, ವಿ.ಸೋಮಸುಂದರ್, ವಾಣೀಶ್ಕುಮಾರ್ ಅವರು ಹೆಸರುಗಳನ್ನು ಆಯ್ಕೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಎರಡೂ ಪಟ್ಟಿಗಳನ್ನು ಒಂದು ಕಡೆ ಇಟ್ಟುಕೊಂಡು ಮೌಲ್ಯಮಾಪನ ಮಾಡಿ ಪಕ್ಷದ ಹಿರಿಯರು, ಅವಕಾಶ ವಂಚಿತರು, ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಂತಿಮಗೊಳಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖಂಡರೊಬ್ಬರು ಹೇಳಿದರು.
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…