ಜಿಲ್ಲೆಗಳು

ದಸರಾ ಉಪ ಸಮಿತಿ : ಗ್ರಾಮೀಣ ಮುಖಂಡರಿಗೂ ಅವಕಾಶ

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು

ಕೆ.ಬಿ.ರಮೇಶನಾಯಕ
ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ ಪಾಳಯದಲ್ಲಿ ಸಂತಸ ಮೂಡಿಸಿದೆ.

ದಸರಾ ಉಪ ಸಮಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ವಿಚಾರ ಹೊರಬರುತ್ತಿದ್ದಂತೆ ಹಲವಾರು ಮುಖಂಡರು ತಮ್ಮ ಹೆಸರನ್ನು ಸೇರಿಸುವಂತೆ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಹೀಗಾಗಿ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಮುಖಂಡರ ಹೆಸರು ಅಂತಿಮವಾದ ಮೇಲೆ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಯಾವ್ಯಾವ ಸಮಿತಿಗಳಿಗೆ ನೇಮಕ: ಸ್ತಬ್ಧಚಿತ್ರ, ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವಸಂಭ್ರಮ-ಯುವ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸಿ, ರೈತ, ಗ್ರಾಮೀಣ ದಸರಾ ಮುಂತಾದ ಉಪ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ತಲಾ ಒಂದೊಂದು ಸಮಿತಿಗೆ ೪೦ರಿಂದ ೫೦ ಸದಸ್ಯರನ್ನು ನೇಮಿಸಲಾಗುತ್ತದೆ. ಬಹುತೇಕ ಉಪ ಸಮಿತಿಗಳಿಗೆ ನಗರದ ಪ್ರಮುಖರು, ನಗರ ಬಿಜೆಪಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಈಗ ಗ್ರಾಮಾಂತರ ಪ್ರದೇಶದ ಮುಖಂಡರನ್ನು ಸೇರಿಸುವ ಕಾರಣ ನಗರ ಮತ್ತು ಗ್ರಾಮಾಂತರ ಬಿಜೆಪಿ ಸಮ್ಮಿಲನದಂತೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದರೆ, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಕ್ಷೇತ್ರದ ಪ್ರಮುಖರಿಂದ ಪಟ್ಟಿ ಕೇಳಲಾಗಿದೆ. ಈ ಕ್ಷೇತ್ರಗಳಿಂದ ಬರುವ ಹೆಸರನ್ನು ಪರಿಶೀಲಿಸಿ ಸಲ್ಲಿಸುವಂತೆ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಅವರಿಗೆ ಹೇಳಲಾಗಿದೆ. ಅದೇ ರೀತಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರ ಸಮ್ಮುಖದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಜಿ.ಗಿರಿಧರ್, ವಿ.ಸೋಮಸುಂದರ್, ವಾಣೀಶ್‌ಕುಮಾರ್ ಅವರು ಹೆಸರುಗಳನ್ನು ಆಯ್ಕೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಎರಡೂ ಪಟ್ಟಿಗಳನ್ನು ಒಂದು ಕಡೆ ಇಟ್ಟುಕೊಂಡು ಮೌಲ್ಯಮಾಪನ ಮಾಡಿ ಪಕ್ಷದ ಹಿರಿಯರು, ಅವಕಾಶ ವಂಚಿತರು, ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಂತಿಮಗೊಳಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖಂಡರೊಬ್ಬರು ಹೇಳಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago