ಜಿಲ್ಲೆಗಳು

ದಸರಾ ಉಪ ಸಮಿತಿ : ಗ್ರಾಮೀಣ ಮುಖಂಡರಿಗೂ ಅವಕಾಶ

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು

ಕೆ.ಬಿ.ರಮೇಶನಾಯಕ
ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ ಪಾಳಯದಲ್ಲಿ ಸಂತಸ ಮೂಡಿಸಿದೆ.

ದಸರಾ ಉಪ ಸಮಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವ ವಿಚಾರ ಹೊರಬರುತ್ತಿದ್ದಂತೆ ಹಲವಾರು ಮುಖಂಡರು ತಮ್ಮ ಹೆಸರನ್ನು ಸೇರಿಸುವಂತೆ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. ಹೀಗಾಗಿ, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಮುಖಂಡರ ಹೆಸರು ಅಂತಿಮವಾದ ಮೇಲೆ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಯಾವ್ಯಾವ ಸಮಿತಿಗಳಿಗೆ ನೇಮಕ: ಸ್ತಬ್ಧಚಿತ್ರ, ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವಸಂಭ್ರಮ-ಯುವ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸಿ, ರೈತ, ಗ್ರಾಮೀಣ ದಸರಾ ಮುಂತಾದ ಉಪ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ತಲಾ ಒಂದೊಂದು ಸಮಿತಿಗೆ ೪೦ರಿಂದ ೫೦ ಸದಸ್ಯರನ್ನು ನೇಮಿಸಲಾಗುತ್ತದೆ. ಬಹುತೇಕ ಉಪ ಸಮಿತಿಗಳಿಗೆ ನಗರದ ಪ್ರಮುಖರು, ನಗರ ಬಿಜೆಪಿ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಈಗ ಗ್ರಾಮಾಂತರ ಪ್ರದೇಶದ ಮುಖಂಡರನ್ನು ಸೇರಿಸುವ ಕಾರಣ ನಗರ ಮತ್ತು ಗ್ರಾಮಾಂತರ ಬಿಜೆಪಿ ಸಮ್ಮಿಲನದಂತೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದರೆ, ಕೆ.ಆರ್.ನಗರ, ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ ಕ್ಷೇತ್ರದ ಪ್ರಮುಖರಿಂದ ಪಟ್ಟಿ ಕೇಳಲಾಗಿದೆ. ಈ ಕ್ಷೇತ್ರಗಳಿಂದ ಬರುವ ಹೆಸರನ್ನು ಪರಿಶೀಲಿಸಿ ಸಲ್ಲಿಸುವಂತೆ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಅವರಿಗೆ ಹೇಳಲಾಗಿದೆ. ಅದೇ ರೀತಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಅವರ ಸಮ್ಮುಖದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಜಿ.ಗಿರಿಧರ್, ವಿ.ಸೋಮಸುಂದರ್, ವಾಣೀಶ್‌ಕುಮಾರ್ ಅವರು ಹೆಸರುಗಳನ್ನು ಆಯ್ಕೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಎರಡೂ ಪಟ್ಟಿಗಳನ್ನು ಒಂದು ಕಡೆ ಇಟ್ಟುಕೊಂಡು ಮೌಲ್ಯಮಾಪನ ಮಾಡಿ ಪಕ್ಷದ ಹಿರಿಯರು, ಅವಕಾಶ ವಂಚಿತರು, ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಂತಿಮಗೊಳಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖಂಡರೊಬ್ಬರು ಹೇಳಿದರು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago