ಪಾಯಿಂಟ್ ಕುಸ್ತಿ, ಪಂಜ ಕುಸ್ತಿ ಪಂದ್ಯಾವಳಿ ಆಯೋಜನೆ
ಮೈಸೂರು: ಸೆ.೨೬ರಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕಿಶೋರಿ, ದಸರಾ ಕುಮಾರ್, ದಸರಾ ಕಿಶೋರ ಪ್ರಶಸ್ತಿಗಳಿಗೆ ಪಾಯಿಂಟ್ ಕುಸ್ತಿಗಳನ್ನು ನಡೆಸಲಾಗುತ್ತದೆ ಎಂದು ದಸರಾ ಕುಸ್ತಿ ಉಪ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಉಪ ವಿಶೇಷಾಧಿಕಾರಿ ಬಿ.ಎನ್.ನಂದಿನಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸೆ.೨೬ರಂದು ೩.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.
ಉತ್ತಮ ಮೈಸೂರು ನಗರನಾಡ ಕುಸ್ತಿ ಪಟು ಒಬ್ಬರಿಗೆ ಮೇಯರ್ ಕಪ್, ಓರ್ವ ಮೈಸೂರು ಗ್ರಾಮಾಂತರ ನಾಡಕುಸ್ತಿ ಪಟುವಿಗೆ ಮಹಾರಾಜರ ಒಡೆಯರ್ ಕಪ್, ರಾಜ್ಯದ ಉತ್ತಮ ನಾಡ ಕುಸ್ತಿಪಟುವಿಗೆ ಸಾಹುಕಾರ್ ಚನ್ನಯ್ಯ ಕಪ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸೆ.೨೯ರಂದು ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘದಿಂದ ರಾಜ್ಯಮಟ್ಟದ ಪುರುಷರು ಮತ್ತು ಮಹಿಳೆಯರು, ವಿಶೇಷಚೇತನರ ಪಂಜ ಕುಸ್ತಿ ಪಂದ್ಯಾವಳಿ ನಡೆಯಲಿದೆ. ವಿಜೇತ ಮಹಿಳಾ ಪಂಜಕುಸ್ತಿ ಪಟುವಿಗೆ ಮೈಸೂರು ದಸರಾ ಕುಮಾರಿ ಪ್ರಶಸ್ತಿ, ವಿಜೇತ ಪುರುಷ ಕುಸ್ತಿಪಟುವಿಗೆ ಮೈಸೂರು ದಸರಾ ಶ್ರೀ ಪ್ರಶಸ್ತಿ, ವಿಶೇಷಚೇತನ ಮಹಿಳಾ ಪಂಜ ಕುಸ್ತಿ ಪಟುವಿಗೆ ದಸರಾ ನವಚೇತನ ತಾರೆ ಪ್ರಶಸ್ತಿ, ವಿಶೇಷಚೇತನ ಪುರುಷ ಪಂಜ ಕುಸ್ತಿಪಟುವಿಗೆ ವಿಶೇಷಚೇತನ-೨೦೨೨ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮೈಸೂರು ವಿಭಾಗ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಪುರುಷ ಕುಸ್ತಿ ಪಟುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಕುಮಾರ ಪ್ರಶಸ್ತಿ, ಅರ್ಧ ಕೆಜಿ ತೂಕದ ಬೆಳ್ಳಿ ಗದೆಯನ್ನು ನೀಡಲಾಗುತ್ತದೆ.
ಈ ವರ್ಷದ ಆಕರ್ಷಣೆಯಾಗಿ ರಾಷ್ಟ್ರಮಟ್ಟದಲ್ಲಿ ಹೆಸರಾಗಿರುವ ಕುಸ್ತಿಪಟು ಹಾಗೂ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲ್ಲಿಕ್ ಅವರನ್ನು ಸೆ.೨೯ರಂದು ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ವಿವರಿಸಿದರು. ಉಪಾಧ್ಯಕ್ಷರಾದ ವೇದರಾಜ್,ಮಹೇಶ್ರಾಜೇ ಅರಸ್, ಕಾರ್ಯದರ್ಶಿ ಎಸ್.ಜೆ.ಹರ್ಷವರ್ಧನ ಹಾಜರಿದ್ದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…