ಜಿಲ್ಲೆಗಳು

ದಸರಾ ಕುಸ್ತಿ ಪಂದ್ಯಾವಳಿಗೆ ಸಾಕ್ಷಿ ಮಲಿಕ್ ಅತಿಥಿ

ಪಾಯಿಂಟ್ ಕುಸ್ತಿ, ಪಂಜ ಕುಸ್ತಿ ಪಂದ್ಯಾವಳಿ ಆಯೋಜನೆ

ಮೈಸೂರು: ಸೆ.೨೬ರಿಂದ ಅ.೨ರವರೆಗೆ ದಸರಾ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ದಸರಾ ಕಂಠೀರವ, ದಸರಾ ಕೇಸರಿ, ದಸರಾ ಕಿಶೋರಿ, ದಸರಾ ಕುಮಾರ್, ದಸರಾ ಕಿಶೋರ ಪ್ರಶಸ್ತಿಗಳಿಗೆ ಪಾಯಿಂಟ್ ಕುಸ್ತಿಗಳನ್ನು ನಡೆಸಲಾಗುತ್ತದೆ ಎಂದು ದಸರಾ ಕುಸ್ತಿ ಉಪ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಉಪ ವಿಶೇಷಾಧಿಕಾರಿ ಬಿ.ಎನ್.ನಂದಿನಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಸ್ತಿ ಪಂದ್ಯಾವಳಿ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸೆ.೨೬ರಂದು ೩.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಸ್ತಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.

ಉತ್ತಮ ಮೈಸೂರು ನಗರನಾಡ ಕುಸ್ತಿ ಪಟು ಒಬ್ಬರಿಗೆ ಮೇಯರ್ ಕಪ್, ಓರ್ವ ಮೈಸೂರು ಗ್ರಾಮಾಂತರ ನಾಡಕುಸ್ತಿ ಪಟುವಿಗೆ ಮಹಾರಾಜರ ಒಡೆಯರ್ ಕಪ್, ರಾಜ್ಯದ ಉತ್ತಮ ನಾಡ ಕುಸ್ತಿಪಟುವಿಗೆ ಸಾಹುಕಾರ್ ಚನ್ನಯ್ಯ ಕಪ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸೆ.೨೯ರಂದು ಕರ್ನಾಟಕ ರಾಜ್ಯ ಪಂಜ ಕುಸ್ತಿ ಸಂಘದಿಂದ ರಾಜ್ಯಮಟ್ಟದ ಪುರುಷರು ಮತ್ತು ಮಹಿಳೆಯರು, ವಿಶೇಷಚೇತನರ ಪಂಜ ಕುಸ್ತಿ ಪಂದ್ಯಾವಳಿ ನಡೆಯಲಿದೆ. ವಿಜೇತ ಮಹಿಳಾ ಪಂಜಕುಸ್ತಿ ಪಟುವಿಗೆ ಮೈಸೂರು ದಸರಾ ಕುಮಾರಿ ಪ್ರಶಸ್ತಿ, ವಿಜೇತ ಪುರುಷ ಕುಸ್ತಿಪಟುವಿಗೆ ಮೈಸೂರು ದಸರಾ ಶ್ರೀ ಪ್ರಶಸ್ತಿ, ವಿಶೇಷಚೇತನ ಮಹಿಳಾ ಪಂಜ ಕುಸ್ತಿ ಪಟುವಿಗೆ ದಸರಾ ನವಚೇತನ ತಾರೆ ಪ್ರಶಸ್ತಿ, ವಿಶೇಷಚೇತನ ಪುರುಷ ಪಂಜ ಕುಸ್ತಿಪಟುವಿಗೆ ವಿಶೇಷಚೇತನ-೨೦೨೨ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮೈಸೂರು ವಿಭಾಗ ಮಟ್ಟದ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಪುರುಷ ಕುಸ್ತಿ ಪಟುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಕುಮಾರ ಪ್ರಶಸ್ತಿ, ಅರ್ಧ ಕೆಜಿ ತೂಕದ ಬೆಳ್ಳಿ ಗದೆಯನ್ನು ನೀಡಲಾಗುತ್ತದೆ.
ಈ ವರ್ಷದ ಆಕರ್ಷಣೆಯಾಗಿ ರಾಷ್ಟ್ರಮಟ್ಟದಲ್ಲಿ ಹೆಸರಾಗಿರುವ ಕುಸ್ತಿಪಟು ಹಾಗೂ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲ್ಲಿಕ್ ಅವರನ್ನು ಸೆ.೨೯ರಂದು ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ವಿವರಿಸಿದರು. ಉಪಾಧ್ಯಕ್ಷರಾದ ವೇದರಾಜ್,ಮಹೇಶ್‌ರಾಜೇ ಅರಸ್, ಕಾರ್ಯದರ್ಶಿ ಎಸ್.ಜೆ.ಹರ್ಷವರ್ಧನ ಹಾಜರಿದ್ದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 hour ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago