ಜಿಲ್ಲೆಗಳು

ದಸರಾ ಮಹೋತ್ಸವದಿಂದ ಸಚಿವ ಎಸ್‌ಟಿಎಸ್‌ ರನ್ನು ದೂರವಿಡಿ : ರಾಜ್ಯಪಾಲರಿಗೆ ಆಮ್ ಆದ್ಮಿ ಮನವಿ

ಬೆಂಗಳೂರು:ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ನಿಯೋಗದ ನೇತೃತ್ವ ವಹಿಸಿದ್ದ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿದ ರಾಜರು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.

“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.

ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.

ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಇದ್ದರು

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

40 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

48 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

53 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

57 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

1 hour ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

1 hour ago