ಬೆಂಗಳೂರು:ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್ ಆದ್ಮಿ ಪಾರ್ಟಿಯ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.
ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್.ಟಿ. ಸೋಮಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.
ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಇದ್ದರು
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…