ಜಿಲ್ಲೆಗಳು

ದಸರಾ ಮಹೋತ್ಸವದಿಂದ ಸಚಿವ ಎಸ್‌ಟಿಎಸ್‌ ರನ್ನು ದೂರವಿಡಿ : ರಾಜ್ಯಪಾಲರಿಗೆ ಆಮ್ ಆದ್ಮಿ ಮನವಿ

ಬೆಂಗಳೂರು:ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ನಿಯೋಗದ ನೇತೃತ್ವ ವಹಿಸಿದ್ದ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿದ ರಾಜರು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.

“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.

ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.

ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಇದ್ದರು

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

13 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

13 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago