ಜಿಲ್ಲೆಗಳು

ದಸರಾ ವೇಳೆ ಮೈಸೂರಿಗೆ ಭೇಟಿ ನೀಡಲಿದೆ ಭಾರತ್‌ ಜೋಡೋ ಯಾತ್ರೆ

ಮೈಸೂರು : ಕಾಂಗ್ರೆಸ್‌ ಪಕ್ಷದ ವತಿಯಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ  ಹಮ್ಮಿಕೊಂಡಿರುವ ಭಾರತ್‌ ಜೋಡೋ ಪಾದ ಯಾತ್ರೆಯು ಸೆಪ್ಟೆಂಬರ್ 30 ರಿಂದ ಕರ್ನಾಟಕದಲ್ಲಿ ಆರಂಭವಾಗಲಿದೆ.

ಭಾರತ್‌ ಜೋಡೋ ಪಾದ ಯಾತ್ರೆ

ಅಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದೆ.

ಗುಂಡ್ಲುಪೇಟೆ

ಎಂಐಟಿ ಕಾಲೇಜ್‌ ನಲ್ಲಿ ವಾಸ್ತವ್ಯ
30ನೇ ತಾರೀಖಿನಂದು ಅಂದು ಬೆಂಡಗಳ್ಳಿ ಗ್ರಾಮದ ಮೂಲಕ ಚಾಮರಾಜನಗರ ಜಿಲ್ಲೆಯ ಬೇಗೂರು ತಲುಪಲಿದ್ದು, ತ್ರಿಪುರ ಸಂಭಾಂಗಣದ ಮುಂದಿನ ಮೈದಾನದಲ್ಲಿ ರಾತ್ರಿ ತಂಗಲಿದೆ. ಬೆಳಗ್ಗೆ ಅಲ್ಲಿಂದ ಆರಂಭವಾಗುವ ಪಾದಯಾತ್ರೆ ಕಳಲೆಗೇಟ್ ಮೂಲಕ ತಾಂಡವಪುರ ಗ್ರಾಮದ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.  ನಂತರ ರಾತ್ರಿ ಎಂಐಟಿ (MIT) ಕಾಲೇಜಿನ ಮುಂಭಾಗದಲ್ಲಿ ಉಳಿಯಲಿದೆ.

 


ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ 
ಭಾರತ್‌ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್‌ 1 ಮತ್ತು 2ನೇ ತಾರೀಖು) 3ನೇ ದಿನ ಮೈಸೂರಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್‍ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.

ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.


ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ.  ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago