ಜಿಲ್ಲೆಗಳು

ಯುವ ಸಂಭ್ರಮಕ್ಕೆ ಸಡಗರದ ತೆರೆ

ಮೈಸೂರು: ವಿಶ್ವವಿಖ್ಯಾತ ದಸರಾ ಪ್ರಯುಕ್ತ ೯ ದಿನಗಳ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಭ್ರಮಕ್ಕೆ ಸಡಗರದ ತೆರೆ ಬಿದ್ದಿತ್ತು.

ಸಂಭ್ರಮದ ಅಂತಿಮ ದಿನವಾದ ಶನಿವಾರ ಇಡೀ ಆವರಣ ಯುವ ಸಮುದಾಯದಿಂದ ಭರ್ತಿಯಾಗಿತ್ತು. ಪ್ರತಿಯೊಂದು ತಂಡದ ನೃತ್ಯವನ್ನು ಪ್ರೇಕ್ಷಕರು ಎಂಜಾಯ್ ಮಾಡಿದರು. ಸಿಳ್ಳೆ, ಚಪ್ಪಾಳೆ ಬಾನೆತ್ತರಕ್ಕೆ ಸದ್ದು ಮಾಡುತ್ತಿದ್ದವು.

ಯುವಕರು, ಯುವತಿಯರು ಕುಣಿದು ಕುಪ್ಪಳಿಸಿದರು. ಯುವ ಸಮೂಹ ಸಾಲಾಗಿ ನಿಂತು ಸ್ಟೆಪ್ ಹಾಕುತ್ತಿದ್ದರು. ನೆರದಿದ್ದ ಪ್ರೇಕ್ಷಕ ವರ್ಗ ವೇದಿಕೆಯಲ್ಲಿನ ನೃತ್ಯ ಪ್ರದರ್ಶನಕ್ಕೆ ಬದಲಾಗಿ ತಮ್ಮ ವಲಯದಲ್ಲೆ ಕುಣಿಯುತ್ತಿದ್ದ ಸಮೂಹವನ್ನು ನೋಡುತ್ತಿದ್ದರು.

ಮೈಸೂರು ಡಿಎಮ್‌ಟ್ರಿನಿಟಿ ಪಿಯು ಕಾಲೇಜು ತಂಡ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶಿಸಿದರು. ಜಯಲಕ್ಷ್ಮೀಪುರಂನ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡ ಪ್ರದರ್ಶಿಸಿದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ನೃತ್ಯ ಎಲ್ಲರನ್ನು ಆಕರ್ಷಿಸಿತು. ಈ ನೃತ್ಯದಲ್ಲಿ ‘ವಂದೇ ಮಾತರಂ’ ಹಾಡಿಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಮೈಸೂರಿನ ಬಸವೇಶ್ವರ ನಗರದ ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡ ಭಾರತೀಯ ಸೇನೆಗೆ ನಮನ ಸಲ್ಲಿಸುವ ನೃತ್ಯವನ್ನು ಪ್ರದರ್ಶಿಸಿದರು. ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು ತಂಡ ಕನ್ನಡ, ಸಂಸ್ಕೃತಿ ಮತ್ತು ಜಾನಪದ ಕಲೆ ಸಂಬಂಧ ನೃತ್ಯ ಪ್ರದರ್ಶಿಸಿದರು. ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜು ತಂಡವು ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿಸುವ ಪದಗಳಿಗೆ ಹೆಜ್ಜೆ ಹಾಕಿದರು. ಸುಮಾರು ೨೫ ತಂಡಗಳು ನೃತ್ಯ ಪ್ರದರ್ಶಿಸಿದವು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago