ಜಿಲ್ಲೆಗಳು

ಯುವ ಸಂಭ್ರಮಕ್ಕೆ ಸಡಗರದ ತೆರೆ

ಮೈಸೂರು: ವಿಶ್ವವಿಖ್ಯಾತ ದಸರಾ ಪ್ರಯುಕ್ತ ೯ ದಿನಗಳ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಭ್ರಮಕ್ಕೆ ಸಡಗರದ ತೆರೆ ಬಿದ್ದಿತ್ತು.

ಸಂಭ್ರಮದ ಅಂತಿಮ ದಿನವಾದ ಶನಿವಾರ ಇಡೀ ಆವರಣ ಯುವ ಸಮುದಾಯದಿಂದ ಭರ್ತಿಯಾಗಿತ್ತು. ಪ್ರತಿಯೊಂದು ತಂಡದ ನೃತ್ಯವನ್ನು ಪ್ರೇಕ್ಷಕರು ಎಂಜಾಯ್ ಮಾಡಿದರು. ಸಿಳ್ಳೆ, ಚಪ್ಪಾಳೆ ಬಾನೆತ್ತರಕ್ಕೆ ಸದ್ದು ಮಾಡುತ್ತಿದ್ದವು.

ಯುವಕರು, ಯುವತಿಯರು ಕುಣಿದು ಕುಪ್ಪಳಿಸಿದರು. ಯುವ ಸಮೂಹ ಸಾಲಾಗಿ ನಿಂತು ಸ್ಟೆಪ್ ಹಾಕುತ್ತಿದ್ದರು. ನೆರದಿದ್ದ ಪ್ರೇಕ್ಷಕ ವರ್ಗ ವೇದಿಕೆಯಲ್ಲಿನ ನೃತ್ಯ ಪ್ರದರ್ಶನಕ್ಕೆ ಬದಲಾಗಿ ತಮ್ಮ ವಲಯದಲ್ಲೆ ಕುಣಿಯುತ್ತಿದ್ದ ಸಮೂಹವನ್ನು ನೋಡುತ್ತಿದ್ದರು.

ಮೈಸೂರು ಡಿಎಮ್‌ಟ್ರಿನಿಟಿ ಪಿಯು ಕಾಲೇಜು ತಂಡ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶಿಸಿದರು. ಜಯಲಕ್ಷ್ಮೀಪುರಂನ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡ ಪ್ರದರ್ಶಿಸಿದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ನೃತ್ಯ ಎಲ್ಲರನ್ನು ಆಕರ್ಷಿಸಿತು. ಈ ನೃತ್ಯದಲ್ಲಿ ‘ವಂದೇ ಮಾತರಂ’ ಹಾಡಿಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಮೈಸೂರಿನ ಬಸವೇಶ್ವರ ನಗರದ ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡ ಭಾರತೀಯ ಸೇನೆಗೆ ನಮನ ಸಲ್ಲಿಸುವ ನೃತ್ಯವನ್ನು ಪ್ರದರ್ಶಿಸಿದರು. ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು ತಂಡ ಕನ್ನಡ, ಸಂಸ್ಕೃತಿ ಮತ್ತು ಜಾನಪದ ಕಲೆ ಸಂಬಂಧ ನೃತ್ಯ ಪ್ರದರ್ಶಿಸಿದರು. ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜು ತಂಡವು ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿಸುವ ಪದಗಳಿಗೆ ಹೆಜ್ಜೆ ಹಾಕಿದರು. ಸುಮಾರು ೨೫ ತಂಡಗಳು ನೃತ್ಯ ಪ್ರದರ್ಶಿಸಿದವು.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

7 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

10 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

11 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

13 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

18 hours ago