ಜಿಲ್ಲೆಗಳು

ಯುವ ಸಂಭ್ರಮಕ್ಕೆ ಸಡಗರದ ತೆರೆ

ಮೈಸೂರು: ವಿಶ್ವವಿಖ್ಯಾತ ದಸರಾ ಪ್ರಯುಕ್ತ ೯ ದಿನಗಳ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಭ್ರಮಕ್ಕೆ ಸಡಗರದ ತೆರೆ ಬಿದ್ದಿತ್ತು.

ಸಂಭ್ರಮದ ಅಂತಿಮ ದಿನವಾದ ಶನಿವಾರ ಇಡೀ ಆವರಣ ಯುವ ಸಮುದಾಯದಿಂದ ಭರ್ತಿಯಾಗಿತ್ತು. ಪ್ರತಿಯೊಂದು ತಂಡದ ನೃತ್ಯವನ್ನು ಪ್ರೇಕ್ಷಕರು ಎಂಜಾಯ್ ಮಾಡಿದರು. ಸಿಳ್ಳೆ, ಚಪ್ಪಾಳೆ ಬಾನೆತ್ತರಕ್ಕೆ ಸದ್ದು ಮಾಡುತ್ತಿದ್ದವು.

ಯುವಕರು, ಯುವತಿಯರು ಕುಣಿದು ಕುಪ್ಪಳಿಸಿದರು. ಯುವ ಸಮೂಹ ಸಾಲಾಗಿ ನಿಂತು ಸ್ಟೆಪ್ ಹಾಕುತ್ತಿದ್ದರು. ನೆರದಿದ್ದ ಪ್ರೇಕ್ಷಕ ವರ್ಗ ವೇದಿಕೆಯಲ್ಲಿನ ನೃತ್ಯ ಪ್ರದರ್ಶನಕ್ಕೆ ಬದಲಾಗಿ ತಮ್ಮ ವಲಯದಲ್ಲೆ ಕುಣಿಯುತ್ತಿದ್ದ ಸಮೂಹವನ್ನು ನೋಡುತ್ತಿದ್ದರು.

ಮೈಸೂರು ಡಿಎಮ್‌ಟ್ರಿನಿಟಿ ಪಿಯು ಕಾಲೇಜು ತಂಡ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶಿಸಿದರು. ಜಯಲಕ್ಷ್ಮೀಪುರಂನ ಶ್ರೀ ವಿವೇಕಾನಂದ ಪದವಿ ಪೂರ್ವ ಕಾಲೇಜು ತಂಡ ಪ್ರದರ್ಶಿಸಿದ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ನೃತ್ಯ ಎಲ್ಲರನ್ನು ಆಕರ್ಷಿಸಿತು. ಈ ನೃತ್ಯದಲ್ಲಿ ‘ವಂದೇ ಮಾತರಂ’ ಹಾಡಿಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಮೈಸೂರಿನ ಬಸವೇಶ್ವರ ನಗರದ ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಂಡ ಭಾರತೀಯ ಸೇನೆಗೆ ನಮನ ಸಲ್ಲಿಸುವ ನೃತ್ಯವನ್ನು ಪ್ರದರ್ಶಿಸಿದರು. ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜು ತಂಡ ಕನ್ನಡ, ಸಂಸ್ಕೃತಿ ಮತ್ತು ಜಾನಪದ ಕಲೆ ಸಂಬಂಧ ನೃತ್ಯ ಪ್ರದರ್ಶಿಸಿದರು. ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜು ತಂಡವು ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿಸುವ ಪದಗಳಿಗೆ ಹೆಜ್ಜೆ ಹಾಕಿದರು. ಸುಮಾರು ೨೫ ತಂಡಗಳು ನೃತ್ಯ ಪ್ರದರ್ಶಿಸಿದವು.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago