ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.
ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಯೋಗ ಸ್ಪರ್ಧೆಗೆ ಹೆಚ್ಚು ಮಂದಿ ಭಾಗವಹಿಸುವ ಮೂಲಕ ಯೋಗದ ಮಹತ್ವವನ್ನು ತಿಳಿಸಿದ್ದೀರಿ. ಮುಂದಿನ ದಿನಗಳಲ್ಲಿ ಸ್ಪರ್ಧಿಗಳ ಸಂಖ್ಯೆ ಇನ್ನಷ್ಟೂ ಹೆಚ್ಚುವ ಮೂಲಕ ಯೋಗದ ಮಹತ್ವ ಎಲ್ಲರಿಗೂ ತಿಳಿಯಬೇಕು ಎಂದು ಹೇಳಿದರು.
ಒಟ್ಟು 11 ವಿಭಾಗಗಳಲ್ಲಿ ಯೋಗ ಸ್ಪರ್ಧೆಗಳನ್ನು ಆಯೋಜಿ ಸಲಾಗಿತ್ತು. ಪ್ರತಿ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ ಹಾಗೂ ತೃತೀ ಯ ಬಹುಮಾನ ನೀಡಲಾಯಿತು. ಇದರ ಜತೆಗೆ ಪ್ರತಿ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಮೂವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ನಿರೀಕ್ಷೆಗೂ ಮೀರಿದ ಸ್ಪರ್ಧಿಗಳು
ಯೋಗ ಸ್ಪರ್ಧೆಯಲ್ಲಿ ಸುಮಾರು ೧ ಸಾವಿರ ಮಂದಿ ಯೋಗಪಟುಗಳು ಭಾಗವಹಿಸಬಹುದು ಎಂದು ಸಂಘಟಕರು ಅಂದಾಜಿಸಿದ್ದರು. ಆದರೆ, ನಿರೀಕ್ಷೆಗೂ ಮೀರಿ ಸ್ಪರ್ಧಿಗಳು ಜಮಾಯಿಸಿದ್ದರು. ಹೀಗಾಗಿ ನಾಲ್ಕು ವೇದಿಕೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು.
ಸಂಸದ ಪ್ರತಾಪ್ ಸಿಂಹ, ಆಯುಷ್ನ ಡಾ.ಲಕ್ಷ್ಮಿ ನಾರಾಯಣ ಶೆಣೈ, ಶ್ರೀಹರಿ, ಡಾ.ಪುಷ್ಪ, ಡಾ.ಕುಸುಮಾ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ಸಂಜೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…
ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ…
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…