ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.
ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಯೋಗ ಸ್ಪರ್ಧೆಗೆ ಹೆಚ್ಚು ಮಂದಿ ಭಾಗವಹಿಸುವ ಮೂಲಕ ಯೋಗದ ಮಹತ್ವವನ್ನು ತಿಳಿಸಿದ್ದೀರಿ. ಮುಂದಿನ ದಿನಗಳಲ್ಲಿ ಸ್ಪರ್ಧಿಗಳ ಸಂಖ್ಯೆ ಇನ್ನಷ್ಟೂ ಹೆಚ್ಚುವ ಮೂಲಕ ಯೋಗದ ಮಹತ್ವ ಎಲ್ಲರಿಗೂ ತಿಳಿಯಬೇಕು ಎಂದು ಹೇಳಿದರು.
ಒಟ್ಟು 11 ವಿಭಾಗಗಳಲ್ಲಿ ಯೋಗ ಸ್ಪರ್ಧೆಗಳನ್ನು ಆಯೋಜಿ ಸಲಾಗಿತ್ತು. ಪ್ರತಿ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ ಹಾಗೂ ತೃತೀ ಯ ಬಹುಮಾನ ನೀಡಲಾಯಿತು. ಇದರ ಜತೆಗೆ ಪ್ರತಿ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಮೂವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ನಿರೀಕ್ಷೆಗೂ ಮೀರಿದ ಸ್ಪರ್ಧಿಗಳು
ಯೋಗ ಸ್ಪರ್ಧೆಯಲ್ಲಿ ಸುಮಾರು ೧ ಸಾವಿರ ಮಂದಿ ಯೋಗಪಟುಗಳು ಭಾಗವಹಿಸಬಹುದು ಎಂದು ಸಂಘಟಕರು ಅಂದಾಜಿಸಿದ್ದರು. ಆದರೆ, ನಿರೀಕ್ಷೆಗೂ ಮೀರಿ ಸ್ಪರ್ಧಿಗಳು ಜಮಾಯಿಸಿದ್ದರು. ಹೀಗಾಗಿ ನಾಲ್ಕು ವೇದಿಕೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು.
ಸಂಸದ ಪ್ರತಾಪ್ ಸಿಂಹ, ಆಯುಷ್ನ ಡಾ.ಲಕ್ಷ್ಮಿ ನಾರಾಯಣ ಶೆಣೈ, ಶ್ರೀಹರಿ, ಡಾ.ಪುಷ್ಪ, ಡಾ.ಕುಸುಮಾ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ಸಂಜೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…