ಮೈಸೂರು: ಯೋಗ ದಸರಾ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಯೋಗ ಸ್ಪರ್ಧೆಯಲ್ಲಿ ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.
ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಯೋಗ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಯೋಗ ಸ್ಪರ್ಧೆಗೆ ಹೆಚ್ಚು ಮಂದಿ ಭಾಗವಹಿಸುವ ಮೂಲಕ ಯೋಗದ ಮಹತ್ವವನ್ನು ತಿಳಿಸಿದ್ದೀರಿ. ಮುಂದಿನ ದಿನಗಳಲ್ಲಿ ಸ್ಪರ್ಧಿಗಳ ಸಂಖ್ಯೆ ಇನ್ನಷ್ಟೂ ಹೆಚ್ಚುವ ಮೂಲಕ ಯೋಗದ ಮಹತ್ವ ಎಲ್ಲರಿಗೂ ತಿಳಿಯಬೇಕು ಎಂದು ಹೇಳಿದರು.
ಒಟ್ಟು 11 ವಿಭಾಗಗಳಲ್ಲಿ ಯೋಗ ಸ್ಪರ್ಧೆಗಳನ್ನು ಆಯೋಜಿ ಸಲಾಗಿತ್ತು. ಪ್ರತಿ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ ಹಾಗೂ ತೃತೀ ಯ ಬಹುಮಾನ ನೀಡಲಾಯಿತು. ಇದರ ಜತೆಗೆ ಪ್ರತಿ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಮೂವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ನಿರೀಕ್ಷೆಗೂ ಮೀರಿದ ಸ್ಪರ್ಧಿಗಳು
ಯೋಗ ಸ್ಪರ್ಧೆಯಲ್ಲಿ ಸುಮಾರು ೧ ಸಾವಿರ ಮಂದಿ ಯೋಗಪಟುಗಳು ಭಾಗವಹಿಸಬಹುದು ಎಂದು ಸಂಘಟಕರು ಅಂದಾಜಿಸಿದ್ದರು. ಆದರೆ, ನಿರೀಕ್ಷೆಗೂ ಮೀರಿ ಸ್ಪರ್ಧಿಗಳು ಜಮಾಯಿಸಿದ್ದರು. ಹೀಗಾಗಿ ನಾಲ್ಕು ವೇದಿಕೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು.
ಸಂಸದ ಪ್ರತಾಪ್ ಸಿಂಹ, ಆಯುಷ್ನ ಡಾ.ಲಕ್ಷ್ಮಿ ನಾರಾಯಣ ಶೆಣೈ, ಶ್ರೀಹರಿ, ಡಾ.ಪುಷ್ಪ, ಡಾ.ಕುಸುಮಾ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ಸಂಜೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…