ಜಿಲ್ಲೆಗಳು

ದಾವಣಗೆರೆಯಲ್ಲಿ ನಡೆಯುವ ಮಹಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಗೀತಾ ಮನವಿ

ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಮನವಿ ಮಾಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಶರಣ ಶರಣೆಯರು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಶಕ್ತಿ ಪ್ರದರ್ಶನಗೊಳ್ಳಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾ ಸಭೆಯು ಸ್ಥಾಪನೆಗೊಂಡು ೧೧೮ ವರ್ಷಗಳಿಂದ ವೀರಶೈವ -ಲಿಂಗಾಯತ ಸಂಘಟನೆ ಮತ್ತು ಶ್ರೇಂಯೋಭಿವೃದ್ದಿಗಾಗಿ ಶ್ರಮಿಸುತ್ತಿದೆ. ಇಂದಿನ ದಿನಮಾನಗಳಲ್ಲಿ ಸಮಾಜದ ಸಂಘಟನೆ ಅತ್ಯಂತ ಮಹತ್ವ ಪಡೆದಿದೆ. ಈ ನಿಟ್ಟಿನಲ್ಲಿ ವೀರಶೈವ- ಲಿಂಗಾಯಿತರನ್ನು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂಘಟಿಸುವ ಉದ್ದೇಶದಿಂದ ಇಲ್ಲಿಯವರಗೆ ೨೨ ಮಹಾ ಅಧಿವೇಶನಗಳು ನಡೆದಿರುತ್ತದೆ ಎಂದರು.

ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ದಾವಣಗೆರೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ೨೩ನೇ ಮಹಾಅಧಿವೇಶನದಲ್ಲಿ ಪ್ರಬಲವಾಗಿ ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯ ಮಾಡಲಾಗುತ್ತದೆ ಎಂದರು.

ಇದಕ್ಕಾಗಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ಜಿಲ್ಲೆಯಿಂದ ೩ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ಗುರಿಹೊಂದಿದ್ದು, ಜಿಲ್ಲೆಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಿಂದ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶ್ವಸಿಗೊಳಿಸುವಂತೆ ಮನವಿ ಮಾಡಿದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago