ಜಿಲ್ಲೆಗಳು

ಡಿ. 3 ರಂದು ವಿಶ್ವ ವಿಶೇಷಚೇತನರ ದಿನಾಚರಣೆ : ಅಗತ್ಯ ಸಿದ್ದತೆಗೆ ಡಿಸಿ ಸೂಚನೆ

ಚಾಮರಾಜನಗರ: ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶ್ವ ವಿಶೇಷಚೇತನರ ದಿನಾಚರಣೆ  ಕಾರ್ಯಕ್ರಮವು  3ರಂದು ನಿಗದಿಯಾಗಿದ್ದು ಇದಕ್ಕೆ ಪುರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ ನ. ೨೯ರಂದು ನಡೆಸಬೇಕು. ಈ ಎರಡೂ ಕಾರ್ಯಕ್ರಮಗಗಳಿಗೆ  ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಎಡಿಸಿ ಕಾತ್ಯಾಯಿನಿದೇವಿ, ಎಎಸ್ಪಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಸಿ.ಜಿ. ರವಿಶಂಕರ್, ಕೆ.ಬಿ.ಆನಂದಪ್ಪನಾಯಕ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮೀ, ನಗರಸಭೆ ಆಯುಕ್ತ ರಾಮದಾಸ್, ಅಂಗವಿಕಲರ ಕಲ್ಯಾಣಾಧಿಕಾರಿ ಸಿ. ದೀಪಾ, ಡಿಎಚ್‌ಒ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿಯ ಎನ್. ಕೃಷ್ಣಮೂರ್ತಿ, ಎಂ. ರಮೇಶ್, ರೂಪೇಶ್, ರಾಜಣ್ಣ, ಇತರರು ಸಭೆಯಲ್ಲಿ ಹಾಜರಿದ್ದರು.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

7 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

7 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

11 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

11 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

11 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

11 hours ago