ಜಿಲ್ಲೆಗಳು

ಡಿಸಿ ನಡೆ ಕಾರ್ಯಕ್ರಮದಲ್ಲಿ ಪಿಡಿಒ ಬದಲಾವಣೆಗೆ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು  ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ ಸರಿಯಾಗಿ ಜನಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ಅವರನ್ನು ಬದಲಾಯಿಸಿ ಎಂಬ ಒತ್ತಾಯವೂ ಕೇಳಿಬಂದಿತು.
ಪೌತಿ ಖಾತೆ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು.

ತಹಸಿಲ್ದಾರ್ ರವಿಶಂಕರ್ ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದರು.
ತಾಪಂ ಇಓ ಶ್ರೀಕಂಠರಾಜೇ ಅರಸ್, ಬಿಇಓ ಶಿವಮೂರ್ತಿ, ವೈದ್ಯೆ ಪುಷ್ಪಲತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜು, ಗ್ರಾ.ಪಂ. ಸದಸ್ಯ ಗುರುಪ್ರಸಾದ್, ಮುಖಂಡರುಗಳಾದ ಶಿವಮಲ್ಲಪ್ಪ, ಮಹದೇವಪ್ಪ, ಶಿವನಾಗಪ್ಪ, ಪರಮೇಶ್ವರಪ್ಪ, ನಾಗಪ್ಪ, ಬಸವಣ್ಣ ಮತ್ತಿತರರು ಹಾಜರಿದ್ದರು.

andolanait

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

9 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

9 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

10 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

10 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

10 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

10 hours ago