ಜಿಲ್ಲೆಗಳು

ಡಿಸಿ ನಡೆ ಕಾರ್ಯಕ್ರಮದಲ್ಲಿ ಪಿಡಿಒ ಬದಲಾವಣೆಗೆ ಒತ್ತಾಯ

ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು  ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ ಸರಿಯಾಗಿ ಜನಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ಅವರನ್ನು ಬದಲಾಯಿಸಿ ಎಂಬ ಒತ್ತಾಯವೂ ಕೇಳಿಬಂದಿತು.
ಪೌತಿ ಖಾತೆ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅರ್ಜಿಗಳನ್ನು ಸಲ್ಲಿಸಿದರು.

ತಹಸಿಲ್ದಾರ್ ರವಿಶಂಕರ್ ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದರು.
ತಾಪಂ ಇಓ ಶ್ರೀಕಂಠರಾಜೇ ಅರಸ್, ಬಿಇಓ ಶಿವಮೂರ್ತಿ, ವೈದ್ಯೆ ಪುಷ್ಪಲತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜು, ಗ್ರಾ.ಪಂ. ಸದಸ್ಯ ಗುರುಪ್ರಸಾದ್, ಮುಖಂಡರುಗಳಾದ ಶಿವಮಲ್ಲಪ್ಪ, ಮಹದೇವಪ್ಪ, ಶಿವನಾಗಪ್ಪ, ಪರಮೇಶ್ವರಪ್ಪ, ನಾಗಪ್ಪ, ಬಸವಣ್ಣ ಮತ್ತಿತರರು ಹಾಜರಿದ್ದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago