ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ ಸರಿಯಾಗಿ ಜನಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ, ಕೂಡಲೇ ಅವರನ್ನು ಬದಲಾಯಿಸಿ ಎಂಬ ಒತ್ತಾಯವೂ ಕೇಳಿಬಂದಿತು.
ತಹಸಿಲ್ದಾರ್ ರವಿಶಂಕರ್ ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಾಗುವುದು ಎಂದರು.
ತಾಪಂ ಇಓ ಶ್ರೀಕಂಠರಾಜೇ ಅರಸ್, ಬಿಇಓ ಶಿವಮೂರ್ತಿ, ವೈದ್ಯೆ ಪುಷ್ಪಲತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಜು, ಗ್ರಾ.ಪಂ. ಸದಸ್ಯ ಗುರುಪ್ರಸಾದ್, ಮುಖಂಡರುಗಳಾದ ಶಿವಮಲ್ಲಪ್ಪ, ಮಹದೇವಪ್ಪ, ಶಿವನಾಗಪ್ಪ, ಪರಮೇಶ್ವರಪ್ಪ, ನಾಗಪ್ಪ, ಬಸವಣ್ಣ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…