ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಕೇವಲ ಹಬ್ಬವಲ್ಲ ಅದು ನಮ್ಮ ಸಂಸ್ಕೃತಿಯ ಸಾರ, ಇದು ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಸುವ ಪವಿತ್ರವಾದ ದಿನ. ಕತ್ತಲಿಂದ ಬೆಳಕಿಗೆ ಸಮಾಜವನ್ನು ತೆಗೆದುಕೊಂಡು ಹೋಗಬೇಕು ಎಂದು ನಮ್ಮ ಧರ್ಮದಲ್ಲಿ ಸಂಸ್ಕೃತಿಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ. ಈ ಶುಭ ವೇಳೆಯಲ್ಲಿ ಎಲ್ಲರ ಬದುಕಿನಲ್ಲೂ ಹೊಸ ಬೆಳಕನ್ನು ಮೂಡಿ, ನೆಮ್ಮದಿ ಬರಲಿ ಎಂದು ಆಶಿಸುತ್ತೇನೆ.
ರೈತರಿಗೆ ಈ ಬಾರಿ ಬಹಳ ಕಷ್ಟ ಇದೆ.ನಾವೆಲ್ಲರೂ ಬರಗಾಲವನ್ನು ಎದುರಿಸುತ್ತಿದ್ದೇವೆ, ಈ ಕಷ್ಟದಲ್ಲಿ ಎಲ್ಲರ ಬದುಕಿನಲ್ಲೂ ಬದಲಾವಣೆ ಆಗಲಿ ಎಂದು ತುಂಬು ಹೃದಯದಿಂದ ಪ್ರಾರ್ಥನೆ ಮಾಡುತ್ತಿದ್ದೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಬೆಳಕಿನ ಹಬ್ಬಕ್ಕೆ ಶುಭ ಕೊರಿದ್ದಾರೆ.
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…