ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಕೇವಲ ಹಬ್ಬವಲ್ಲ ಅದು ನಮ್ಮ ಸಂಸ್ಕೃತಿಯ ಸಾರ, ಇದು ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಸುವ ಪವಿತ್ರವಾದ ದಿನ. ಕತ್ತಲಿಂದ ಬೆಳಕಿಗೆ ಸಮಾಜವನ್ನು ತೆಗೆದುಕೊಂಡು ಹೋಗಬೇಕು ಎಂದು ನಮ್ಮ ಧರ್ಮದಲ್ಲಿ ಸಂಸ್ಕೃತಿಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ. ಈ ಶುಭ ವೇಳೆಯಲ್ಲಿ ಎಲ್ಲರ ಬದುಕಿನಲ್ಲೂ ಹೊಸ ಬೆಳಕನ್ನು ಮೂಡಿ, ನೆಮ್ಮದಿ ಬರಲಿ ಎಂದು ಆಶಿಸುತ್ತೇನೆ.
ರೈತರಿಗೆ ಈ ಬಾರಿ ಬಹಳ ಕಷ್ಟ ಇದೆ.ನಾವೆಲ್ಲರೂ ಬರಗಾಲವನ್ನು ಎದುರಿಸುತ್ತಿದ್ದೇವೆ, ಈ ಕಷ್ಟದಲ್ಲಿ ಎಲ್ಲರ ಬದುಕಿನಲ್ಲೂ ಬದಲಾವಣೆ ಆಗಲಿ ಎಂದು ತುಂಬು ಹೃದಯದಿಂದ ಪ್ರಾರ್ಥನೆ ಮಾಡುತ್ತಿದ್ದೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಬೆಳಕಿನ ಹಬ್ಬಕ್ಕೆ ಶುಭ ಕೊರಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…