ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ, ಹಬ್ಬಕ್ಕೆ ಶುಭ ಕೋರಿರುವ ವಿಡಿಯೋ ಹಂಚಿಕೊಂಡಿದ್ದಾರೆ. ದೀಪಾವಳಿ ಕೇವಲ ಹಬ್ಬವಲ್ಲ ಅದು ನಮ್ಮ ಸಂಸ್ಕೃತಿಯ ಸಾರ, ಇದು ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಸುವ ಪವಿತ್ರವಾದ ದಿನ. ಕತ್ತಲಿಂದ ಬೆಳಕಿಗೆ ಸಮಾಜವನ್ನು ತೆಗೆದುಕೊಂಡು ಹೋಗಬೇಕು ಎಂದು ನಮ್ಮ ಧರ್ಮದಲ್ಲಿ ಸಂಸ್ಕೃತಿಯಲ್ಲಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ. ಈ ಶುಭ ವೇಳೆಯಲ್ಲಿ ಎಲ್ಲರ ಬದುಕಿನಲ್ಲೂ ಹೊಸ ಬೆಳಕನ್ನು ಮೂಡಿ, ನೆಮ್ಮದಿ ಬರಲಿ ಎಂದು ಆಶಿಸುತ್ತೇನೆ.
ರೈತರಿಗೆ ಈ ಬಾರಿ ಬಹಳ ಕಷ್ಟ ಇದೆ.ನಾವೆಲ್ಲರೂ ಬರಗಾಲವನ್ನು ಎದುರಿಸುತ್ತಿದ್ದೇವೆ, ಈ ಕಷ್ಟದಲ್ಲಿ ಎಲ್ಲರ ಬದುಕಿನಲ್ಲೂ ಬದಲಾವಣೆ ಆಗಲಿ ಎಂದು ತುಂಬು ಹೃದಯದಿಂದ ಪ್ರಾರ್ಥನೆ ಮಾಡುತ್ತಿದ್ದೇನೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶೇಷವಾಗಿ ಬೆಳಕಿನ ಹಬ್ಬಕ್ಕೆ ಶುಭ ಕೊರಿದ್ದಾರೆ.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…