ಜಿಲ್ಲೆಗಳು

ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಪ್ರಕರಣ: ಸಿಪಿಐ ಸೇರಿ ಐವರನ್ನು ಅಮಾನತು

ಸಿಪಿಐ ಶಿವಮಾದಯ್ಯ ಸಸ್ಪೆಂಡ್ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಕುಂತೂರುಮೋಳೆ ಗ್ರಾಮದ ನಿಂಗರಾಜು ಮಂಗಳವಾರ ಜೀಪ್‌ನಿಂದ ಜಿಗಿದು ಮೃತಪಟ್ಟಿದ್ದರು. ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಕೂಡಲೇ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಉಪ್ಪಾರ ಸಮುದಾಯಾದವರು ಮಂಗಳವಾರ ಪ್ರತಿಭಟಿಸಿದ್ದರು. ಬುಧವಾರ ಸಿಪಿಐ ಶಿವಮಾದಯ್ಯ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಮಾದೇಗೌಡ ಹಾಗೂ ಪೇದೆ ಸೋಮಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಪ್ರಗತಿಪರ ಸಂಘಟನೆಗಳ ಪ್ರತಿಭಟನೆ: ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅಂಬೇಡ್ಕರ್ ಸೇವಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ದಲಿತಪರ, ಪ್ರಗತಿಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಮಂಗಳವಾರ ನಡೆದಿರುವ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಹೇಗೆ ಸಾವನ್ನಪ್ಪಿದ ಎಂಬುದನ್ನು ತನಿಖೆ ನಡೆಸದೆ ಪೋಲಿಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಸಿಪಿಐ ಶಿವವಾದಯ್ಯರನ್ನು ಉದ್ದೇಶ ಪೂರ್ವಕವಾಗಿ ಇದರಲ್ಲಿ ಶಾಮೀಲು ಮಾಡಲಾಗಿದೆ. ಇದರಲ್ಲಿ ರಾಜಕೀಯ ಪಿತೂರಿ ಹಾಗೂ ವೈಯಕ್ತಿಕ ದ್ವೇಷದಿಂದ ಹೀಗೆ ಮಾಡಲಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈಯಕ್ತಿಕ ಪ್ರತಿಷ್ಠೆಗಾಗಿ ಶಿವಮಾದಯ್ಯರನ್ನು ನೇರ ಹೊಣೆಯಾಗಿ ಮಾಡಿ ಇವರನ್ನು ಬಲಿಪಶು ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಇವರ ಅಮಾನತ್ತಿನ ಆದೇಶವನ್ನು ಹಿಂಪಡೆಯಬೇಕು. ಶಿವವಾದಯ್ಯರನ್ನು ಕರ್ತವ್ಯದಲ್ಲಿ ಮುಂದುವರೆಸಬೇಕು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ನಂತರ ಡಿವೈಎಸ್‌ಪಿ ನಾಗರಾಜುರವರಿಗೆ ಮನವಿಪತ್ರವನ್ನು ಸಲ್ಲಿಸಲಾಯಿತು. ಇದನ್ನು ಸ್ವೀಕರಿಸಿ ಮಾತನಾಡಿದ ನಾಗರಾಜು, ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಸಿಪಿಐ ಶಿವಮಾದಯ್ಯರವರೂ ಸೇರಿದಂತೆ ಇತರರಿಗೆ ನ್ಯಾಯ ಸಿಗುವ ಭರವಸೆ ಇದೆ. ಪ್ರಗತಿಪರ ಸಂಘಟನೆಗಳ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು. ಈ ಮನವಿಯನ್ನು ಇಲಾಖೆಯು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿ. ರೇವಣ್ಣ, ಮದ್ದೂರು ಚಕ್ರವರ್ತಿ, ಶಿವಮೂರ್ತಿ, ದೊಡ್ಡಿಂದುವಾಡಿ ಸಿದ್ದರಾಜು, ಮಾಂಬಳ್ಳಿ ರಾಮು, ಜೆ.ಶ್ರೀನಿವಾಸ್, ದುಗ್ಗಹಟ್ಟಿ ಮಹೇಶ್, ಅಗ್ರಹಾರ ರಂಗಸ್ವಾಮಿ, ಕೆಸ್ತೂರು ನಾಗರಾಜು, ರಾಮಾಪುರ ರಂಗಸ್ವಾಮಿ, ಚಂದ್ರಶೇಖರ, ಡಿ.ರಂಗಸ್ವಾಮಿ, ಮಾಂಬಳ್ಳಿ ಕಾಂತರಾಜು, ಮಹೇಶ, ರಾಮಸಮುದ್ರ ಸುರೇಶ್, ಚಂದ್ರಶೇಖರ್, ರಾಚಪ್ಪ, ರವಿ ಸೇರಿದಂತೆ ಅನೇಕರು ಇದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago