ಜಿಲ್ಲೆಗಳು

ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಪ್ರಕರಣ: ಸಿಪಿಐ ಸೇರಿ ಐವರನ್ನು ಅಮಾನತು

ಸಿಪಿಐ ಶಿವಮಾದಯ್ಯ ಸಸ್ಪೆಂಡ್ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಕುಂತೂರುಮೋಳೆ ಗ್ರಾಮದ ನಿಂಗರಾಜು ಮಂಗಳವಾರ ಜೀಪ್‌ನಿಂದ ಜಿಗಿದು ಮೃತಪಟ್ಟಿದ್ದರು. ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಕೂಡಲೇ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಉಪ್ಪಾರ ಸಮುದಾಯಾದವರು ಮಂಗಳವಾರ ಪ್ರತಿಭಟಿಸಿದ್ದರು. ಬುಧವಾರ ಸಿಪಿಐ ಶಿವಮಾದಯ್ಯ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಮಾದೇಗೌಡ ಹಾಗೂ ಪೇದೆ ಸೋಮಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಪ್ರಗತಿಪರ ಸಂಘಟನೆಗಳ ಪ್ರತಿಭಟನೆ: ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅಂಬೇಡ್ಕರ್ ಸೇವಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ದಲಿತಪರ, ಪ್ರಗತಿಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಮಂಗಳವಾರ ನಡೆದಿರುವ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಹೇಗೆ ಸಾವನ್ನಪ್ಪಿದ ಎಂಬುದನ್ನು ತನಿಖೆ ನಡೆಸದೆ ಪೋಲಿಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಸಿಪಿಐ ಶಿವವಾದಯ್ಯರನ್ನು ಉದ್ದೇಶ ಪೂರ್ವಕವಾಗಿ ಇದರಲ್ಲಿ ಶಾಮೀಲು ಮಾಡಲಾಗಿದೆ. ಇದರಲ್ಲಿ ರಾಜಕೀಯ ಪಿತೂರಿ ಹಾಗೂ ವೈಯಕ್ತಿಕ ದ್ವೇಷದಿಂದ ಹೀಗೆ ಮಾಡಲಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈಯಕ್ತಿಕ ಪ್ರತಿಷ್ಠೆಗಾಗಿ ಶಿವಮಾದಯ್ಯರನ್ನು ನೇರ ಹೊಣೆಯಾಗಿ ಮಾಡಿ ಇವರನ್ನು ಬಲಿಪಶು ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಇವರ ಅಮಾನತ್ತಿನ ಆದೇಶವನ್ನು ಹಿಂಪಡೆಯಬೇಕು. ಶಿವವಾದಯ್ಯರನ್ನು ಕರ್ತವ್ಯದಲ್ಲಿ ಮುಂದುವರೆಸಬೇಕು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ನಂತರ ಡಿವೈಎಸ್‌ಪಿ ನಾಗರಾಜುರವರಿಗೆ ಮನವಿಪತ್ರವನ್ನು ಸಲ್ಲಿಸಲಾಯಿತು. ಇದನ್ನು ಸ್ವೀಕರಿಸಿ ಮಾತನಾಡಿದ ನಾಗರಾಜು, ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಸಿಪಿಐ ಶಿವಮಾದಯ್ಯರವರೂ ಸೇರಿದಂತೆ ಇತರರಿಗೆ ನ್ಯಾಯ ಸಿಗುವ ಭರವಸೆ ಇದೆ. ಪ್ರಗತಿಪರ ಸಂಘಟನೆಗಳ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು. ಈ ಮನವಿಯನ್ನು ಇಲಾಖೆಯು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿ. ರೇವಣ್ಣ, ಮದ್ದೂರು ಚಕ್ರವರ್ತಿ, ಶಿವಮೂರ್ತಿ, ದೊಡ್ಡಿಂದುವಾಡಿ ಸಿದ್ದರಾಜು, ಮಾಂಬಳ್ಳಿ ರಾಮು, ಜೆ.ಶ್ರೀನಿವಾಸ್, ದುಗ್ಗಹಟ್ಟಿ ಮಹೇಶ್, ಅಗ್ರಹಾರ ರಂಗಸ್ವಾಮಿ, ಕೆಸ್ತೂರು ನಾಗರಾಜು, ರಾಮಾಪುರ ರಂಗಸ್ವಾಮಿ, ಚಂದ್ರಶೇಖರ, ಡಿ.ರಂಗಸ್ವಾಮಿ, ಮಾಂಬಳ್ಳಿ ಕಾಂತರಾಜು, ಮಹೇಶ, ರಾಮಸಮುದ್ರ ಸುರೇಶ್, ಚಂದ್ರಶೇಖರ್, ರಾಚಪ್ಪ, ರವಿ ಸೇರಿದಂತೆ ಅನೇಕರು ಇದ್ದರು.

AddThis Website Tools
andolana

Recent Posts

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ಜಯಂತಿಗಳ ಆಚರಣೆ: ಎಡಿಸಿ ಡಾ.ಪಿ ಶಿವರಾಜು

ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು…

27 mins ago

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಗ್ರಾಹಕರಿಗೆ ಅಡಚಣೆ ರಹಿತವಾದ…

36 mins ago

ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

3 hours ago

ಪೋಷಕರಿಗೆ ಗುಡ್‌ನ್ಯೂಸ್:‌ 1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಪೋಷಕರಿಗೆ ಗುಡ್‌ನ್ಯೂಸ್‌ ನೀಡಿದೆ. 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು…

3 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಶಾಕ್‌ ನೀಡಿದ ಹೈಕೋರ್ಟ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ…

3 hours ago

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A…

3 hours ago