ಜಿಲ್ಲೆಗಳು

ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಪ್ರಕರಣ: ಸಿಪಿಐ ಸೇರಿ ಐವರನ್ನು ಅಮಾನತು

ಸಿಪಿಐ ಶಿವಮಾದಯ್ಯ ಸಸ್ಪೆಂಡ್ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಯಳಂದೂರು: ತಾಲ್ಲೂಕಿನ ಯರಿಯೂರು ಗ್ರಾಮದ ಬಳಿ ಪೊಲೀಸ್ ಜೀಪ್‌ನಿಂದ ಜಿಗಿದು ಮೃತಪಟ್ಟ ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವಿನ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಪೂರ್ವಕವಾಗಿ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಕುಂತೂರುಮೋಳೆ ಗ್ರಾಮದ ನಿಂಗರಾಜು ಮಂಗಳವಾರ ಜೀಪ್‌ನಿಂದ ಜಿಗಿದು ಮೃತಪಟ್ಟಿದ್ದರು. ಈ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದ್ದು ಕೂಡಲೇ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಉಪ್ಪಾರ ಸಮುದಾಯಾದವರು ಮಂಗಳವಾರ ಪ್ರತಿಭಟಿಸಿದ್ದರು. ಬುಧವಾರ ಸಿಪಿಐ ಶಿವಮಾದಯ್ಯ ಮಾಂಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಮಾದೇಗೌಡ ಹಾಗೂ ಪೇದೆ ಸೋಮಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.
ಪ್ರಗತಿಪರ ಸಂಘಟನೆಗಳ ಪ್ರತಿಭಟನೆ: ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅಂಬೇಡ್ಕರ್ ಸೇವಾ ಸಮಿತಿ, ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವು ದಲಿತಪರ, ಪ್ರಗತಿಪರ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಮಂಗಳವಾರ ನಡೆದಿರುವ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಹೇಗೆ ಸಾವನ್ನಪ್ಪಿದ ಎಂಬುದನ್ನು ತನಿಖೆ ನಡೆಸದೆ ಪೋಲಿಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಸಿಪಿಐ ಶಿವವಾದಯ್ಯರನ್ನು ಉದ್ದೇಶ ಪೂರ್ವಕವಾಗಿ ಇದರಲ್ಲಿ ಶಾಮೀಲು ಮಾಡಲಾಗಿದೆ. ಇದರಲ್ಲಿ ರಾಜಕೀಯ ಪಿತೂರಿ ಹಾಗೂ ವೈಯಕ್ತಿಕ ದ್ವೇಷದಿಂದ ಹೀಗೆ ಮಾಡಲಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈಯಕ್ತಿಕ ಪ್ರತಿಷ್ಠೆಗಾಗಿ ಶಿವಮಾದಯ್ಯರನ್ನು ನೇರ ಹೊಣೆಯಾಗಿ ಮಾಡಿ ಇವರನ್ನು ಬಲಿಪಶು ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಇವರ ಅಮಾನತ್ತಿನ ಆದೇಶವನ್ನು ಹಿಂಪಡೆಯಬೇಕು. ಶಿವವಾದಯ್ಯರನ್ನು ಕರ್ತವ್ಯದಲ್ಲಿ ಮುಂದುವರೆಸಬೇಕು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ನಂತರ ಡಿವೈಎಸ್‌ಪಿ ನಾಗರಾಜುರವರಿಗೆ ಮನವಿಪತ್ರವನ್ನು ಸಲ್ಲಿಸಲಾಯಿತು. ಇದನ್ನು ಸ್ವೀಕರಿಸಿ ಮಾತನಾಡಿದ ನಾಗರಾಜು, ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಸಿಪಿಐ ಶಿವಮಾದಯ್ಯರವರೂ ಸೇರಿದಂತೆ ಇತರರಿಗೆ ನ್ಯಾಯ ಸಿಗುವ ಭರವಸೆ ಇದೆ. ಪ್ರಗತಿಪರ ಸಂಘಟನೆಗಳ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು. ಈ ಮನವಿಯನ್ನು ಇಲಾಖೆಯು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ವಹಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಡಿ. ರೇವಣ್ಣ, ಮದ್ದೂರು ಚಕ್ರವರ್ತಿ, ಶಿವಮೂರ್ತಿ, ದೊಡ್ಡಿಂದುವಾಡಿ ಸಿದ್ದರಾಜು, ಮಾಂಬಳ್ಳಿ ರಾಮು, ಜೆ.ಶ್ರೀನಿವಾಸ್, ದುಗ್ಗಹಟ್ಟಿ ಮಹೇಶ್, ಅಗ್ರಹಾರ ರಂಗಸ್ವಾಮಿ, ಕೆಸ್ತೂರು ನಾಗರಾಜು, ರಾಮಾಪುರ ರಂಗಸ್ವಾಮಿ, ಚಂದ್ರಶೇಖರ, ಡಿ.ರಂಗಸ್ವಾಮಿ, ಮಾಂಬಳ್ಳಿ ಕಾಂತರಾಜು, ಮಹೇಶ, ರಾಮಸಮುದ್ರ ಸುರೇಶ್, ಚಂದ್ರಶೇಖರ್, ರಾಚಪ್ಪ, ರವಿ ಸೇರಿದಂತೆ ಅನೇಕರು ಇದ್ದರು.

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

3 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

7 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

9 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

9 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

9 hours ago