Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಒಣಗಿದ ಮರ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

————————————

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!