ಜಿಲ್ಲೆಗಳು

ಒಣಗಿದ ಮರ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ.
ಮೃತ ಪೌರಕಾರ್ಮಿಕ ಉದಯಕುಮಾರ್ (೩೧) ಎಂದು ಗುರುತಿಸಲಾಗಿದೆ. ಮಂಡ್ಯ ನಗರಸಭೆಯ ನೇರಪಾವತಿ ಪೌರಕಾರ್ಮಿಕನಾಗಿದ್ದು, ಗುರುವಾರ ರಾತ್ರಿ ೯ ಗಂಟೆ ಸಮಯದಲ್ಲಿ ತನ್ನ ಹೆಂಡತಿ ಮಕ್ಕಳೊಂದಿಗೆ ನಗರದ ತಾವರೆಗೆರೆಯ ಚಲುವಯ್ಯ ಉದ್ಯಾನವನದ ಬಳಿ ಬೈಕ್‌ನಲ್ಲಿ ಸಾಗುವಾಗ ಒಣಗಿ ನಿಂತಿದ್ದ ಮರ ಉರುಳಿ ಸಾವನ್ನಪ್ಪಿದ್ದಾನೆ. ಜತೆಯಲ್ಲಿದ್ದ ಹೆಂಡತಿ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದರಿ ಮರ ಒಣಗಿದ್ದು ಮರವನ್ನು ತೆರವುಗೊಳಿಸುವಂತೆ ಮಂಡ್ಯ ನಗರಸಭೆ ಅರಣ್ಯ ಇಲಾಖೆಗೆ ಪತ್ರವನ್ನು ಬರೆದಿದ್ದಾಗಿಯೂ ಅರಣ್ಯ ಇಲಾಖೆ ನಿರ್ಲಕ್ಷದಿಂದ ಈ ಪ್ರಕರಣ ನಡೆದಿದೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಪರಿಹಾರಕ್ಕೆ ಆಗ್ರಹ:
ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಕನಿಷ್ಟ ೨೦ ಲಕ್ಷ ರೂ.ಪರಿಹಾರ ನೀಡುವಂತೆ ಹಾಗೂ ಮೃತನ ಕುಟುಂಬಕ್ಕೆ ಅನುಕಂಪದ ನೌಕರಿ ನೀಡುವಂತೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷ ಮಂಜು, ಆಯುಕ್ತ ಮಂಜುನಾಥ್ ನಗರಸಭಾ ಸದಸ್ಯ ಶ್ರೀಧರ್ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

————————————

andolanait

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

6 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

6 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago