ಜಿಲ್ಲೆಗಳು

ಸಾವಿನಲ್ಲೂ 7 ಮಂದಿಗೆ ಮರುಜೀವ ನೀಡಿದ ಮಹಿಳೆ

ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ

ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ.
ಮಾಲತಿ ಅವರು ಪತಿಯೊಂದಿಗೆ ಡಿ.31ರಂದು ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿ ಹೊಡೆದು ಮಾಲತಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಮಾಲತಿ ಅವರ ಹೆಲ್ಮೆಟ್ ಧರಿಸಿದ್ದರು. ಲಾಕ್ ಆಗದ ಕಾರಣ ಹೆಲ್ಮೆಟ್ ಕಳಚಿ ತಲೆಗೆ ಪೆಟ್ಟು ಬಿದ್ದಿತ್ತು. ಇವರನ್ನು ನಿರ್ಮಲಾ ಆಸ್ಪತ್ರೆಯಿಂದ ಅಪೊಲೋ ಬಿಜಿಎಸ್ ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿ ಕರೆತರಲಾಯಿತು.
ಆರಂಭಿಕ ಸಿಟಿ ಸ್ಕ್ಯಾನ್ ನಿಂದ ಅವರ ಮೆದುಳು ಕಾಂಡವು ಊದಿಕೊಂಡಿರುವುದು ಪತ್ತೆಯಾಯಿತು. ತಕ್ಷಣ ಅವರನ್ನು ಜೀವ ರಕ್ಷಕ ವ್ಯವಸ್ಥೆ ಮತ್ತು ತುರ್ತು ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಯಿತು. ಐಸಿಯುನಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿ ಇರಿಸಲಾಗಿದ್ದ ಮಾಲತಿ ಅವರ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಜ.1ರಂದು ರಾತ್ರಿ 9.ಕ್ಕೆ ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದು ತಜ್ಞವೈದ್ಯರ ತಂಡವು ಘೋಷಣೆ ಮಾಡಿತು.
ಪರೀಕ್ಷೆಗಳ ಮೂಲಕ ಅವರ ಅಂಗಾಂಗಗಳು ದಾನಕ್ಕೆ ಯೋಗ್ಯವಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲಾಯಿತು. ಶಿಷ್ಟಾಚಾರದಂತೆ ಕುಟುಂಬ ಸದಸ್ಯರಿಗೆ ಅಂಗಾಂಗ ದಾನದ ಕುರಿತು ಕೌನ್ಸೆಲಿಂಗ್ ನಡೆಸಲಾಯಿತು.ಅವರ ಕುಟುಂಬದವರು ಅಂಗಾಂಗ ದಾನಕ್ಕೆ ಸಮ್ಮತಿಸಿದರು.
ಜೀವ ಸಾರ್ಥಕತೆ ಅಧಿಕಾರಿಗಳು, ಅಂಗಾಂಗ ಕಸಿಗೆ ಕಾಯುತ್ತಿರುವ ರೋಗಿಗಳ ಪಟ್ಟಿ ಸಿದ್ಧಪಡಿಸಿದರು. ಸೋಮವಾರ ಬೆಳಿಗ್ಗೆ ೮.೩೦ರ ವೇಳೆಯಲ್ಲಿ ಮಾಲತಿ ಅವರ ಅಂಗಾಂಗಗಳನ್ನು (ಶ್ವಾಸಕೋಶಗಳು, ಎರಡು ಮೂತ್ರಪಿಂಡ, ಒಂದು ಯಕೃತ್ತು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳು)ಬೇರ್ಪಡಿಸಲಾಯಿತು ಮತ್ತು ೯.೦೯ರ ಹೊತ್ತಿಗೆ ಮೈಸೂರಿನ ಅಪೊಲೋ ಬಿಜಿಎಸ್ ಹಾಸ್ಪಿಟಲ್ಸ್‌ನಲ್ಲಿ ಕ್ರಾಸ್ ಕ್ಲಾಂಪ್ ಪ್ರಕ್ರಿಯೆ ಮೂಲಕ ಅಂಗಾಂಗ ಕಸಿಯನ್ನು ಪೂರ್ಣಗೊಳಿಸಲಾಯಿತು. ಶ್ವಾಸಕೋಶಗಳನ್ನು ಸಿಕಂದರಾಬಾದ್ನ ಕಿಮ್ಸ್ ಗೆ ಏರ್‌ಲಿಫ್ಟ್ ಮಾಡಲಾಯಿತು. ಯಕೃತ್ತು ಹಾಗೂ ಎಡ ಮೂತ್ರಪಿಂಡವನ್ನು ಮೈಸೂರಿನ ಅಪೊಲೋ ಬಿಜಿಎಸ್ ಆಸ್ಪತ್ರೆಗೆ, ಬಲ ಮೂತ್ರಪಿಂಡವನ್ನು ಮೈಸೂರಿನ ಜಿಎಸ್‌ಎಸ್ ಆಸ್ಪತ್ರೆಗೆ, ಹೃದಯ ಕವಾಟಗಳನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ, ಕಾರ್ನಿಯಾಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಅಪೋಲೊ ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಎನ್.ಜಿ.ಭರತೀಶ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

2 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

2 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

8 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

8 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

8 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

8 hours ago