ಜಿಲ್ಲೆಗಳು

ಸಾವಿನಲ್ಲೂ 7 ಮಂದಿಗೆ ಮರುಜೀವ ನೀಡಿದ ಮಹಿಳೆ

ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಮಿದುಳು ನಿಷ್ಕ್ರಿಯ; ಅಂಗಾಂಗ ದಾನ

ಮೈಸೂರು: ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯೊಬ್ಬರ ಅಂಗಾಂಗ ದಾನ ಮಾಡಿ ಏಳು ಜನರ ಪ್ರಾಣ ಉಳಿಸಲಾಗಿದೆ.
ಮಾಲತಿ ಅವರು ಪತಿಯೊಂದಿಗೆ ಡಿ.31ರಂದು ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿ ಹೊಡೆದು ಮಾಲತಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಮಾಲತಿ ಅವರ ಹೆಲ್ಮೆಟ್ ಧರಿಸಿದ್ದರು. ಲಾಕ್ ಆಗದ ಕಾರಣ ಹೆಲ್ಮೆಟ್ ಕಳಚಿ ತಲೆಗೆ ಪೆಟ್ಟು ಬಿದ್ದಿತ್ತು. ಇವರನ್ನು ನಿರ್ಮಲಾ ಆಸ್ಪತ್ರೆಯಿಂದ ಅಪೊಲೋ ಬಿಜಿಎಸ್ ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿ ಕರೆತರಲಾಯಿತು.
ಆರಂಭಿಕ ಸಿಟಿ ಸ್ಕ್ಯಾನ್ ನಿಂದ ಅವರ ಮೆದುಳು ಕಾಂಡವು ಊದಿಕೊಂಡಿರುವುದು ಪತ್ತೆಯಾಯಿತು. ತಕ್ಷಣ ಅವರನ್ನು ಜೀವ ರಕ್ಷಕ ವ್ಯವಸ್ಥೆ ಮತ್ತು ತುರ್ತು ಆರೈಕೆಗಾಗಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಯಿತು. ಐಸಿಯುನಲ್ಲಿ ಜೀವರಕ್ಷಕ ವ್ಯವಸ್ಥೆಯಲ್ಲಿ ಇರಿಸಲಾಗಿದ್ದ ಮಾಲತಿ ಅವರ ಸ್ಥಿತಿ ಅತ್ಯಂತ ಗಂಭೀರವಾಗಿತ್ತು. ಜ.1ರಂದು ರಾತ್ರಿ 9.ಕ್ಕೆ ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದು ತಜ್ಞವೈದ್ಯರ ತಂಡವು ಘೋಷಣೆ ಮಾಡಿತು.
ಪರೀಕ್ಷೆಗಳ ಮೂಲಕ ಅವರ ಅಂಗಾಂಗಗಳು ದಾನಕ್ಕೆ ಯೋಗ್ಯವಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲಾಯಿತು. ಶಿಷ್ಟಾಚಾರದಂತೆ ಕುಟುಂಬ ಸದಸ್ಯರಿಗೆ ಅಂಗಾಂಗ ದಾನದ ಕುರಿತು ಕೌನ್ಸೆಲಿಂಗ್ ನಡೆಸಲಾಯಿತು.ಅವರ ಕುಟುಂಬದವರು ಅಂಗಾಂಗ ದಾನಕ್ಕೆ ಸಮ್ಮತಿಸಿದರು.
ಜೀವ ಸಾರ್ಥಕತೆ ಅಧಿಕಾರಿಗಳು, ಅಂಗಾಂಗ ಕಸಿಗೆ ಕಾಯುತ್ತಿರುವ ರೋಗಿಗಳ ಪಟ್ಟಿ ಸಿದ್ಧಪಡಿಸಿದರು. ಸೋಮವಾರ ಬೆಳಿಗ್ಗೆ ೮.೩೦ರ ವೇಳೆಯಲ್ಲಿ ಮಾಲತಿ ಅವರ ಅಂಗಾಂಗಗಳನ್ನು (ಶ್ವಾಸಕೋಶಗಳು, ಎರಡು ಮೂತ್ರಪಿಂಡ, ಒಂದು ಯಕೃತ್ತು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳು)ಬೇರ್ಪಡಿಸಲಾಯಿತು ಮತ್ತು ೯.೦೯ರ ಹೊತ್ತಿಗೆ ಮೈಸೂರಿನ ಅಪೊಲೋ ಬಿಜಿಎಸ್ ಹಾಸ್ಪಿಟಲ್ಸ್‌ನಲ್ಲಿ ಕ್ರಾಸ್ ಕ್ಲಾಂಪ್ ಪ್ರಕ್ರಿಯೆ ಮೂಲಕ ಅಂಗಾಂಗ ಕಸಿಯನ್ನು ಪೂರ್ಣಗೊಳಿಸಲಾಯಿತು. ಶ್ವಾಸಕೋಶಗಳನ್ನು ಸಿಕಂದರಾಬಾದ್ನ ಕಿಮ್ಸ್ ಗೆ ಏರ್‌ಲಿಫ್ಟ್ ಮಾಡಲಾಯಿತು. ಯಕೃತ್ತು ಹಾಗೂ ಎಡ ಮೂತ್ರಪಿಂಡವನ್ನು ಮೈಸೂರಿನ ಅಪೊಲೋ ಬಿಜಿಎಸ್ ಆಸ್ಪತ್ರೆಗೆ, ಬಲ ಮೂತ್ರಪಿಂಡವನ್ನು ಮೈಸೂರಿನ ಜಿಎಸ್‌ಎಸ್ ಆಸ್ಪತ್ರೆಗೆ, ಹೃದಯ ಕವಾಟಗಳನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ, ಕಾರ್ನಿಯಾಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಅಪೋಲೊ ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಎನ್.ಜಿ.ಭರತೀಶ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

34 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago