ಜಿಲ್ಲೆಗಳು

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಸಾವಿಗೆ ಶರಣು

ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26)
ಮೃತರು.

ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ.ನಗರದ ಜೆ ಎಸ್ ಎಸ್ ಕಾಲೇಜು ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.

ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ‌ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ನಗರದ ಜೆ ಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು.
ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.

ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳುವ ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಸಾವಿಗೆ ಶರಣಾಗಿದ್ದಾರೆ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago