ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26)
ಮೃತರು.
ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ.ನಗರದ ಜೆ ಎಸ್ ಎಸ್ ಕಾಲೇಜು ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.
ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ನಗರದ ಜೆ ಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು.
ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.
ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳುವ ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಸಾವಿಗೆ ಶರಣಾಗಿದ್ದಾರೆ.
ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…
ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…