ಚಾಮರಾಜನಗರ: ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26)
ಮೃತರು.
ಅವಿವಾಹಿತೆಯಾಗಿದ್ದ ಚಂದನಾ ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ.ನಗರದ ಜೆ ಎಸ್ ಎಸ್ ಕಾಲೇಜು ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.
ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ನಗರದ ಜೆ ಎಸ್ ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು.
ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.
ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳುವ ಬೆಳಿಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಸಾವಿಗೆ ಶರಣಾಗಿದ್ದಾರೆ.
ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…