ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ ತಳಿಯ ಬಸವಪ್ಪ ಹಲವು ದಿನಗಳಿಂದ ಕಾಲು ಮುರಿದು ಕೊಂಡು ನೋವಿನಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಈ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿರುವ ಹಿನ್ನೆಲೆಯಲ್ಲಿ ತಹಸಿಲ್ದಾರ್ ಅವರ ನೇತೃತ್ವದಲ್ಲಿ ಬಸವಪ್ಪನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಅಂತ್ಯಸಂಸ್ಕಾರಕ್ಕೆ ನೂರಾರು ಜನರು ಆಗಮಿಸಿ ಬಸವಪ್ಪನ ಅಂತಿನ ದರ್ಶನ ಪಡೆದರು.
ಗಣ್ಯರ ಭೇಟಿ: ಶಾಸಕ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಂಗ್ರೆಸ್ ಮುಖಂಡರಾದ ಗುರುಚರಣ್, ಆಶತ=ಯ್ ಮಧು ಮಾದೇಗೌಡ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಬಸವಪ್ಪನ ಅಂತಿಮ ದರ್ಶನ ಪಡೆದರು.
ಮೆರವಣಿಗೆ: ಇದಕ್ಕೂ ಮುನ್ನ ಬಸವಪ್ಪನನ್ನು ಶೃಂಗರಿಸಿ ಎತ್ತುಗಾಡಿಯ ಮೂಲಕ ಮೆರವಣಿಗೆ ಮಾಡಲಾಯಿತು. ಬಳಿಕ ಬನ್ನಿಮರದ ಬಳಿ ಹೂಳಲಾಯಿತು.
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…