ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ ತಳಿಯ ಬಸವಪ್ಪ ಹಲವು ದಿನಗಳಿಂದ ಕಾಲು ಮುರಿದು ಕೊಂಡು ನೋವಿನಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಈ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿರುವ ಹಿನ್ನೆಲೆಯಲ್ಲಿ ತಹಸಿಲ್ದಾರ್ ಅವರ ನೇತೃತ್ವದಲ್ಲಿ ಬಸವಪ್ಪನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಅಂತ್ಯಸಂಸ್ಕಾರಕ್ಕೆ ನೂರಾರು ಜನರು ಆಗಮಿಸಿ ಬಸವಪ್ಪನ ಅಂತಿನ ದರ್ಶನ ಪಡೆದರು.
ಗಣ್ಯರ ಭೇಟಿ: ಶಾಸಕ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಂಗ್ರೆಸ್ ಮುಖಂಡರಾದ ಗುರುಚರಣ್, ಆಶತ=ಯ್ ಮಧು ಮಾದೇಗೌಡ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಬಸವಪ್ಪನ ಅಂತಿಮ ದರ್ಶನ ಪಡೆದರು.
ಮೆರವಣಿಗೆ: ಇದಕ್ಕೂ ಮುನ್ನ ಬಸವಪ್ಪನನ್ನು ಶೃಂಗರಿಸಿ ಎತ್ತುಗಾಡಿಯ ಮೂಲಕ ಮೆರವಣಿಗೆ ಮಾಡಲಾಯಿತು. ಬಳಿಕ ಬನ್ನಿಮರದ ಬಳಿ ಹೂಳಲಾಯಿತು.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…