ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ ಕರೆತರಲಾಗಿತ್ತು. ನಂತರ ರಾಜ್ಯಾ ದ್ಯಂತ ಜನಮನ್ನಣೆ ಗಳಿಸಿತ್ತು. 4 ವರ್ಷ ಪ್ರಾಯದ ಹಳ್ಳಿಕಾರ್ ತಳಿಯ ಬಸವಪ್ಪ ಹಲವು ದಿನಗಳಿಂದ ಕಾಲು ಮುರಿದು ಕೊಂಡು ನೋವಿನಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಈ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿರುವ ಹಿನ್ನೆಲೆಯಲ್ಲಿ ತಹಸಿಲ್ದಾರ್ ಅವರ ನೇತೃತ್ವದಲ್ಲಿ ಬಸವಪ್ಪನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ. ಅಂತ್ಯಸಂಸ್ಕಾರಕ್ಕೆ ನೂರಾರು ಜನರು ಆಗಮಿಸಿ ಬಸವಪ್ಪನ ಅಂತಿನ ದರ್ಶನ ಪಡೆದರು.
ಗಣ್ಯರ ಭೇಟಿ: ಶಾಸಕ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕಾಂಗ್ರೆಸ್ ಮುಖಂಡರಾದ ಗುರುಚರಣ್, ಆಶತ=ಯ್ ಮಧು ಮಾದೇಗೌಡ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಬಸವಪ್ಪನ ಅಂತಿಮ ದರ್ಶನ ಪಡೆದರು.
ಮೆರವಣಿಗೆ: ಇದಕ್ಕೂ ಮುನ್ನ ಬಸವಪ್ಪನನ್ನು ಶೃಂಗರಿಸಿ ಎತ್ತುಗಾಡಿಯ ಮೂಲಕ ಮೆರವಣಿಗೆ ಮಾಡಲಾಯಿತು. ಬಳಿಕ ಬನ್ನಿಮರದ ಬಳಿ ಹೂಳಲಾಯಿತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…