ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ.
ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕನನ್ನು ವಿಚಾರಣೆ ಮಾಡಲಾಗುತ್ತಿದೆ. ಇನ್ನು ದಿನೇಶ್ ಅವರ ಪತ್ನಿ ಮತ್ತು ಪುತ್ರನು ಖಾಸಗಿ ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳ್ನಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ ಮನೆಗೆ ತೆರಳಿದ್ದು, ಅಲ್ಲಿಂದ ಅವರು ಯಾರಿಗೂ ಸಿಕ್ಕಿಲ್ಲ. ಅವರ ಮೊಬೈಲ್ ಕೂಡ ಶನಿವಾರ ರಾತ್ರಿಯಿಂದಲೇ ಬಂದ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಬೆಳಿಗ್ಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ದಿನೇಶ್ಕುಮಾರ್ ಅವರ ಪತ್ನಿ ಮತ್ತು ಪುತ್ರನನ್ನು ಮನೋವೈದ್ಯರಿಂದ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಪ್ರಕರಣದಿಂದ ಹುಟ್ಟಿರುವ ಪ್ರಶ್ನೆಗಳು: ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ದಿನೇಶ್ ಮೃತದೇಹವನ್ನು ಪೊಲೀಸರ ಗಮನಕ್ಕೆ ತಾರದೇ ಆಸ್ಪತ್ರೆಗೆ ಸಾಗಿಸಲಾಗಿರುವುದು. ಆಸ್ಪತ್ರೆ ಆ್ಯಂಬುಲೆನ್ಸ್ ಬಳಸದೆ ಖಾಸಗಿ ಆ್ಯಂಬುಲೆನ್ಸ್ ಬಳಸಿರುವುದು. ಸಾವು ಸಹಜವಾಗಿದ್ದರೆ ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಪತ್ನಿ ಹಾಗೂ ಪುತ್ರ ಮಾಡಿಲ್ಲ. ಅಲ್ಲದೇ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ ಎಂಬ ಅಂಶಗಳು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿವೆ.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…