ಜಿಲ್ಲೆಗಳು

ಸರ್ಕಾರಿ ಅಧಿಕಾರಿ ಸಾವು: ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ

ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ.

ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕನನ್ನು ವಿಚಾರಣೆ ಮಾಡಲಾಗುತ್ತಿದೆ. ಇನ್ನು ದಿನೇಶ್ ಅವರ ಪತ್ನಿ ಮತ್ತು ಪುತ್ರನು ಖಾಸಗಿ ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳ್‌ನಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ ಮನೆಗೆ ತೆರಳಿದ್ದು, ಅಲ್ಲಿಂದ ಅವರು ಯಾರಿಗೂ ಸಿಕ್ಕಿಲ್ಲ. ಅವರ ಮೊಬೈಲ್ ಕೂಡ ಶನಿವಾರ ರಾತ್ರಿಯಿಂದಲೇ ಬಂದ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಬೆಳಿಗ್ಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ದಿನೇಶ್‌ಕುಮಾರ್ ಅವರ ಪತ್ನಿ ಮತ್ತು ಪುತ್ರನನ್ನು ಮನೋವೈದ್ಯರಿಂದ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಪ್ರಕರಣದಿಂದ ಹುಟ್ಟಿರುವ ಪ್ರಶ್ನೆಗಳು: ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ದಿನೇಶ್ ಮೃತದೇಹವನ್ನು ಪೊಲೀಸರ ಗಮನಕ್ಕೆ ತಾರದೇ ಆಸ್ಪತ್ರೆಗೆ ಸಾಗಿಸಲಾಗಿರುವುದು. ಆಸ್ಪತ್ರೆ ಆ್ಯಂಬುಲೆನ್ಸ್ ಬಳಸದೆ ಖಾಸಗಿ ಆ್ಯಂಬುಲೆನ್ಸ್ ಬಳಸಿರುವುದು. ಸಾವು ಸಹಜವಾಗಿದ್ದರೆ ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಪತ್ನಿ ಹಾಗೂ ಪುತ್ರ ಮಾಡಿಲ್ಲ. ಅಲ್ಲದೇ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ ಎಂಬ ಅಂಶಗಳು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿವೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago