ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ.
ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕನನ್ನು ವಿಚಾರಣೆ ಮಾಡಲಾಗುತ್ತಿದೆ. ಇನ್ನು ದಿನೇಶ್ ಅವರ ಪತ್ನಿ ಮತ್ತು ಪುತ್ರನು ಖಾಸಗಿ ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳ್ನಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ ಮನೆಗೆ ತೆರಳಿದ್ದು, ಅಲ್ಲಿಂದ ಅವರು ಯಾರಿಗೂ ಸಿಕ್ಕಿಲ್ಲ. ಅವರ ಮೊಬೈಲ್ ಕೂಡ ಶನಿವಾರ ರಾತ್ರಿಯಿಂದಲೇ ಬಂದ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಬೆಳಿಗ್ಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ದಿನೇಶ್ಕುಮಾರ್ ಅವರ ಪತ್ನಿ ಮತ್ತು ಪುತ್ರನನ್ನು ಮನೋವೈದ್ಯರಿಂದ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಪ್ರಕರಣದಿಂದ ಹುಟ್ಟಿರುವ ಪ್ರಶ್ನೆಗಳು: ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ದಿನೇಶ್ ಮೃತದೇಹವನ್ನು ಪೊಲೀಸರ ಗಮನಕ್ಕೆ ತಾರದೇ ಆಸ್ಪತ್ರೆಗೆ ಸಾಗಿಸಲಾಗಿರುವುದು. ಆಸ್ಪತ್ರೆ ಆ್ಯಂಬುಲೆನ್ಸ್ ಬಳಸದೆ ಖಾಸಗಿ ಆ್ಯಂಬುಲೆನ್ಸ್ ಬಳಸಿರುವುದು. ಸಾವು ಸಹಜವಾಗಿದ್ದರೆ ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಪತ್ನಿ ಹಾಗೂ ಪುತ್ರ ಮಾಡಿಲ್ಲ. ಅಲ್ಲದೇ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ ಎಂಬ ಅಂಶಗಳು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…