ಜಿಲ್ಲೆಗಳು

ಸರ್ಕಾರಿ ಅಧಿಕಾರಿ ಸಾವು: ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ

ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ.

ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕನನ್ನು ವಿಚಾರಣೆ ಮಾಡಲಾಗುತ್ತಿದೆ. ಇನ್ನು ದಿನೇಶ್ ಅವರ ಪತ್ನಿ ಮತ್ತು ಪುತ್ರನು ಖಾಸಗಿ ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳ್‌ನಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ ಮನೆಗೆ ತೆರಳಿದ್ದು, ಅಲ್ಲಿಂದ ಅವರು ಯಾರಿಗೂ ಸಿಕ್ಕಿಲ್ಲ. ಅವರ ಮೊಬೈಲ್ ಕೂಡ ಶನಿವಾರ ರಾತ್ರಿಯಿಂದಲೇ ಬಂದ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಬೆಳಿಗ್ಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ದಿನೇಶ್‌ಕುಮಾರ್ ಅವರ ಪತ್ನಿ ಮತ್ತು ಪುತ್ರನನ್ನು ಮನೋವೈದ್ಯರಿಂದ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಪ್ರಕರಣದಿಂದ ಹುಟ್ಟಿರುವ ಪ್ರಶ್ನೆಗಳು: ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ದಿನೇಶ್ ಮೃತದೇಹವನ್ನು ಪೊಲೀಸರ ಗಮನಕ್ಕೆ ತಾರದೇ ಆಸ್ಪತ್ರೆಗೆ ಸಾಗಿಸಲಾಗಿರುವುದು. ಆಸ್ಪತ್ರೆ ಆ್ಯಂಬುಲೆನ್ಸ್ ಬಳಸದೆ ಖಾಸಗಿ ಆ್ಯಂಬುಲೆನ್ಸ್ ಬಳಸಿರುವುದು. ಸಾವು ಸಹಜವಾಗಿದ್ದರೆ ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಪತ್ನಿ ಹಾಗೂ ಪುತ್ರ ಮಾಡಿಲ್ಲ. ಅಲ್ಲದೇ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ ಎಂಬ ಅಂಶಗಳು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿವೆ.

andolana

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 hour ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

2 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

7 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

7 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

8 hours ago