ಮೈಸೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಆಗಿದ್ದ ಡಿ.ಕೆ.ದಿನೇಶ್ ಕುಮಾರ್(೫೦) ಅವರ ನಿಗೂಢ ಸಾವಿಗೆ ಸಂಬಂಧಪಟ್ಟಂತೆ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ.
ಮೃತರ ಸೋದರ ಮಾವ ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿರುವಂತೆ ಮನೆಯ ಕೆಲಸಗಾರರು, ಆಸ್ಪತ್ರೆಗೆ ಮೃತದೇಹವನ್ನು ತಂದ ಆ್ಯಂಬುಲೆನ್ಸ್ ಚಾಲಕನನ್ನು ವಿಚಾರಣೆ ಮಾಡಲಾಗುತ್ತಿದೆ. ಇನ್ನು ದಿನೇಶ್ ಅವರ ಪತ್ನಿ ಮತ್ತು ಪುತ್ರನು ಖಾಸಗಿ ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳ್ನಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ ಮನೆಗೆ ತೆರಳಿದ್ದು, ಅಲ್ಲಿಂದ ಅವರು ಯಾರಿಗೂ ಸಿಕ್ಕಿಲ್ಲ. ಅವರ ಮೊಬೈಲ್ ಕೂಡ ಶನಿವಾರ ರಾತ್ರಿಯಿಂದಲೇ ಬಂದ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಬೆಳಿಗ್ಗೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ದಿನೇಶ್ಕುಮಾರ್ ಅವರ ಪತ್ನಿ ಮತ್ತು ಪುತ್ರನನ್ನು ಮನೋವೈದ್ಯರಿಂದ ಸಮಾಲೋಚನೆಗೆ ಒಳಪಡಿಸಲು ನಿರ್ಧರಿಸಲಾಗಿದೆ.
ಪ್ರಕರಣದಿಂದ ಹುಟ್ಟಿರುವ ಪ್ರಶ್ನೆಗಳು: ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ದಿನೇಶ್ ಮೃತದೇಹವನ್ನು ಪೊಲೀಸರ ಗಮನಕ್ಕೆ ತಾರದೇ ಆಸ್ಪತ್ರೆಗೆ ಸಾಗಿಸಲಾಗಿರುವುದು. ಆಸ್ಪತ್ರೆ ಆ್ಯಂಬುಲೆನ್ಸ್ ಬಳಸದೆ ಖಾಸಗಿ ಆ್ಯಂಬುಲೆನ್ಸ್ ಬಳಸಿರುವುದು. ಸಾವು ಸಹಜವಾಗಿದ್ದರೆ ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಪತ್ನಿ ಹಾಗೂ ಪುತ್ರ ಮಾಡಿಲ್ಲ. ಅಲ್ಲದೇ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ ಎಂಬ ಅಂಶಗಳು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿವೆ.
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…