ಎಚ್.ಡಿ.ಕೋಟೆ: ಪಟ್ಟಣದ ಕೃಷ್ಣಾಪುರದ ವಿದ್ಯಾರ್ಥಿ ನಿಲಯದಲ್ಲಿ ಗಿರಿಜನ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ವಾರ್ಡನ್ ಮತ್ತು ಅಡುಗೆಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ತಾಲ್ಲೂಕಿನ ಮಾರನಹಾಡಿ ಗಿರಿಜನ ಯುವಕ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪಿುುಂಸಿ ವಿದ್ಯಾರ್ಥಿ ಆಕಾಶ್ ಸೋಮವಾರ ಪಟ್ಟಣದ ಕೃಷ್ಣಪುರದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯದಲ್ಲಿ ನೇಣು ಬಿಗಿದ ರೀತಿಯಲ್ಲಿ ಸಾವನಪ್ಪಿದ್ದ.
ಸೋಮವಾರ ರಾತ್ರಿ ಆಕಾಶ್ ಅವರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು. ಮಂಗಳವಾರ ಮಧ್ಯಾಹ್ನ ಮಾರನ ಹಾಡಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಪ್ರಕರಣ ದಾಖಲಿಸಿಕೊಂಡಿರುವ ಸರ್ಕಲ್ ಇನ್ಸ್ಪೆಕ್ಟರ್ ಬಸವರಾಜ್ ಅವರ ತಂಡ ಸಾವಿನ ನಿಖರ ವಿಚಾರ ತಿಳಿಯಲು ವಿದ್ಯಾರ್ಥಿ ನಿಲಯದ ವಾರ್ಡನ್, ಅಡುಗೆಯವರು ಹಾಗೂ ಆತನ ಸ್ನೇಹಿತರು, ಶಿಕ್ಷಕ, ಶಿಕ್ಷಕಿಯರ ವಿಚಾರಣೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.
ಪರಿಶಿಷ್ಟ ಕಲ್ಯಾಣ ಇಲಾಖೆಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಮತ್ತು ಅಡುಗೆಯವರಿಗೆ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…