ಜಿಲ್ಲೆಗಳು

ಗಿರಿಜನ ವಿದ್ಯಾರ್ಥಿ ಸಾವು; ವಾರ್ಡನ್, ಅಡುಗೆಯವರಿಗೆ ನೋಟಿಸ್ ಜಾರಿ

ಎಚ್.ಡಿ.ಕೋಟೆ: ಪಟ್ಟಣದ ಕೃಷ್ಣಾಪುರದ ವಿದ್ಯಾರ್ಥಿ ನಿಲಯದಲ್ಲಿ ಗಿರಿಜನ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ವಾರ್ಡನ್ ಮತ್ತು ಅಡುಗೆಯವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ತಾಲ್ಲೂಕಿನ ಮಾರನಹಾಡಿ ಗಿರಿಜನ ಯುವಕ, ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪಿುುಂಸಿ ವಿದ್ಯಾರ್ಥಿ ಆಕಾಶ್ ಸೋಮವಾರ ಪಟ್ಟಣದ ಕೃಷ್ಣಪುರದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯದಲ್ಲಿ ನೇಣು ಬಿಗಿದ ರೀತಿಯಲ್ಲಿ ಸಾವನಪ್ಪಿದ್ದ.

ಸೋಮವಾರ ರಾತ್ರಿ ಆಕಾಶ್ ಅವರ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು. ಮಂಗಳವಾರ ಮಧ್ಯಾಹ್ನ ಮಾರನ ಹಾಡಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

ಪ್ರಕರಣ ದಾಖಲಿಸಿಕೊಂಡಿರುವ ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜ್ ಅವರ ತಂಡ ಸಾವಿನ ನಿಖರ ವಿಚಾರ ತಿಳಿಯಲು ವಿದ್ಯಾರ್ಥಿ ನಿಲಯದ ವಾರ್ಡನ್, ಅಡುಗೆಯವರು ಹಾಗೂ ಆತನ ಸ್ನೇಹಿತರು, ಶಿಕ್ಷಕ, ಶಿಕ್ಷಕಿಯರ ವಿಚಾರಣೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.

ಪರಿಶಿಷ್ಟ ಕಲ್ಯಾಣ ಇಲಾಖೆಯ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ಡನ್ ಮತ್ತು ಅಡುಗೆಯವರಿಗೆ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

1 hour ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

1 hour ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

1 hour ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

1 hour ago